ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಗನ್ನಾಥ ಶೆಟ್ಟಿ ಅವರು ಸಹಾಯಕ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
1997 ರಲ್ಲಿ ಪೋಲೀಸ್ ಇಲಾಖೆಗೆ ಸೇರಿದ ಇವರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಬಳಿಕ ಮಂಗಳೂರು ರೌಡಿ ನಿಗ್ರಹ ದಳದಲ್ಲಿ ಸೇವೆ, ಬಂಟ್ವಾಳ ವೃತ್ತ ನಿರೀಕ್ಷಕರ ಕಚೇರಿ, ಉಪ್ಪಿನಂಗಡಿ ಪೋಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ಮಂಗಳೂರು ಹೆಚ್ಚುವರಿ ಪೋಲೀಸ್ ಅಧೀಕ್ಷಕರ ಕಚೇರಿ, ಐಎಸ್ಡಿ ಬಂಟ್ವಾಳ ಹೀಗೆ ಇಷ್ಟು ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಹೆಚ್.ಸಿ.ಯಾಗಿ ಮುಂಬಡ್ತಿ ಹೊಂದಿದ ಇವರು ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಗೆ ವರ್ಗಾವಣೆಯಾದರು, ಬಳಿಕ ಅರಣ್ಯಸಂಚಾರಿ ಇಲಾಖೆ ಮಂಗಳೂರು, ಎಸ್. ಪಿ.ಕಚೇರಿಯ ವಿಶೇಷ ವಿಭಾಗ, ಬಂಟ್ವಾಳ ನಗರ ಪೋಲೀಸ್ ಠಾಣೆ, ಇದೀಗ ಡಿ.ವೈಎಸ್.ಪಿ.ಕಚೇರಿಯಿಂದ ಎಎಸ್ಐಯಾಗಿ ಮುಂಬಡ್ತಿಯಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…