ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದೇವಿನಗರದ ಹಿಂದೂ ರುದ್ರಭೂಮಿಯಲ್ಲಿ ಕಳ್ಳತನ; ಜಾಗೃತೆ ವಹಿಸಿ

ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ವಾಣಿಜ್ಯ ಕೇಂದ್ರಗಳಲ್ಲಿ ಕಳ್ಳತನ ನಡೆಯುವುದು ಕೇಳಿದ್ದೇವೆ.

ಆದರೆ ಇದೀಗ ರುದ್ರಭೂಮಿಯನ್ನು ಬಿಡದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಬಗ್ಗೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ಮಾಹಿತಿ ನೀಡಿದ್ದಾರೆ. ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ.

ಅಗಸ್ಟ್ 11ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವು ಮಾಡಿದ ಬಗ್ಗೆ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್‌ನ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುವ ಕುರಿತು ಮಾತಾನಾಡಿದ್ದಾರೆ. ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಕಂಡು ಬಂದಿದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ ಜಾಗೃತೆಯಿಂದ ಇರುವಂತೆ ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

error: Content is protected !!