ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ವಾಣಿಜ್ಯ ಕೇಂದ್ರಗಳಲ್ಲಿ ಕಳ್ಳತನ ನಡೆಯುವುದು ಕೇಳಿದ್ದೇವೆ.
ಆದರೆ ಇದೀಗ ರುದ್ರಭೂಮಿಯನ್ನು ಬಿಡದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಬಗ್ಗೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ಮಾಹಿತಿ ನೀಡಿದ್ದಾರೆ. ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ.
ಅಗಸ್ಟ್ 11ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವು ಮಾಡಿದ ಬಗ್ಗೆ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್ನ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುವ ಕುರಿತು ಮಾತಾನಾಡಿದ್ದಾರೆ. ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಕಂಡು ಬಂದಿದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ ಜಾಗೃತೆಯಿಂದ ಇರುವಂತೆ ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…