ಜನ ಮನದ ನಾಡಿ ಮಿಡಿತ

Advertisement

ಕುಸಿದುಬಿದ್ದು ಬಸ್‌ ನಿರ್ವಾಹಕ ಸಾವು..!!

ಅಡ್ಯಾರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್‌ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ.

 


ಕುತ್ತಾರು ನಿವಾಸಿ ಸಂತೋಷ್‌ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ತೆರಳುವ ಟ್ರಿಪ್‌ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ. ಬಸ್ಸೊಳಗಡೆ ಶಾಲಾ ವಿದ್ಯಾರ್ಥಿಗಳನ್ನು ಹತ್ತಿಸುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸೇರಿಕೊಂಡು ಆಸ್ಪತ್ರೆ ಸೇರಿಸುವ ಪ್ರಯತ್ನ ಮಾಡಿದರಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತರು ಹಲವು ವರ್ಷಗಳಿಂದ ನಿಟ್ಟೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ನಿಟ್ಟೆ ಸಂಸ್ಥೆ ಹಲವು ವರ್ಷಗಳಿಂದ ಸರಕಾರಿ ಶಾಲೆ, ಆಶ್ರಮಗಳಿಂದ ಕಲಿಯುವ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಪ್ರಯತ್ನವನ್ನು ಹಲವು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇದೇ ಟ್ರಿಪ್‌ ನಲ್ಲಿ ಸಂತೋಷ್‌ ಕರ್ತವ್ಯ ನಿರ್ವಹಿಸುತ್ತಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!