ಜನ ಮನದ ನಾಡಿ ಮಿಡಿತ

Advertisement

ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಚಿನ್ನ ದೋಚಿ ಬಂದವ ಮಂಗಳೂರಲ್ಲಿ ಪೊಲೀಸರ ಬಲೆಗೆ…

ತಂದೆ ತಾಯಿಗಿಂದ ಹೆಚ್ಚಿನ ತನ್ನ ಸ್ವಂತ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿ, ತದನಂತರ ಚಿನ್ನಾಭರಣಗಳನ್ನು ದೋಚಿದವ ಮಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಕಲ್ ಎಂದು ಗುರುತಿಸಲಾಗಿದೆ.

ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಪೊಲೀಸರು ಮಂಗಳೂರು ಕಾರ್ ಸ್ಟೀಟ್ ಗೆ ತೆರಳಿ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೇಸ್ ಬಯಲಾಗಿದೆ. ಆರೋಪಿ ಅಹಮ್ಮದ್ ಅಕ್ಕಲ್ ಜುಲೈ 23ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿ ಮುತ್ತಿನ ಎರಡು ಎಳೆಯ ಬಂಗಾರದ ಸರ, ಸಣ್ಣ ಪದಕವಿರುವ ಒಂದು ಸರ, ಕಿವಿಯೊಲೆ ಮೂರು ಜೊತೆ, ಐದು ಉಂಗುರ, ಎರಡು ಕೈಬಳೆ, ಪಾಸ್ ಪೋರ್ಟ್ ಹಾಗೂ ಇತರ ದಾಖಲಾತಿಗಳು ಇದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!