ತಂದೆ ತಾಯಿಗಿಂದ ಹೆಚ್ಚಿನ ತನ್ನ ಸ್ವಂತ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿ, ತದನಂತರ ಚಿನ್ನಾಭರಣಗಳನ್ನು ದೋಚಿದವ ಮಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಕಲ್ ಎಂದು ಗುರುತಿಸಲಾಗಿದೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಪೊಲೀಸರು ಮಂಗಳೂರು ಕಾರ್ ಸ್ಟೀಟ್ ಗೆ ತೆರಳಿ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೇಸ್ ಬಯಲಾಗಿದೆ. ಆರೋಪಿ ಅಹಮ್ಮದ್ ಅಕ್ಕಲ್ ಜುಲೈ 23ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿ ಮುತ್ತಿನ ಎರಡು ಎಳೆಯ ಬಂಗಾರದ ಸರ, ಸಣ್ಣ ಪದಕವಿರುವ ಒಂದು ಸರ, ಕಿವಿಯೊಲೆ ಮೂರು ಜೊತೆ, ಐದು ಉಂಗುರ, ಎರಡು ಕೈಬಳೆ, ಪಾಸ್ ಪೋರ್ಟ್ ಹಾಗೂ ಇತರ ದಾಖಲಾತಿಗಳು ಇದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…