ತಂದೆ ತಾಯಿಗಿಂದ ಹೆಚ್ಚಿನ ತನ್ನ ಸ್ವಂತ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿ, ತದನಂತರ ಚಿನ್ನಾಭರಣಗಳನ್ನು ದೋಚಿದವ ಮಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಕಲ್ ಎಂದು ಗುರುತಿಸಲಾಗಿದೆ.
ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಯುವಕನೊಬ್ಬ ಚಿನ್ನಾಭರಣಗಳನ್ನು ಮಾರಾಟ ಮಾಡಲು ಬಂದಿದ್ದಾನೆ ಎಂಬ ಮಾಹಿತಿ ಬಂದಿತ್ತು. ಕೂಡಲೇ ಪೊಲೀಸರು ಮಂಗಳೂರು ಕಾರ್ ಸ್ಟೀಟ್ ಗೆ ತೆರಳಿ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೇಸ್ ಬಯಲಾಗಿದೆ. ಆರೋಪಿ ಅಹಮ್ಮದ್ ಅಕ್ಕಲ್ ಜುಲೈ 23ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ, ಅವರ ಚಿನ್ನಾಭರಣಗಳನ್ನು ದೋಚಿ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿ ಮುತ್ತಿನ ಎರಡು ಎಳೆಯ ಬಂಗಾರದ ಸರ, ಸಣ್ಣ ಪದಕವಿರುವ ಒಂದು ಸರ, ಕಿವಿಯೊಲೆ ಮೂರು ಜೊತೆ, ಐದು ಉಂಗುರ, ಎರಡು ಕೈಬಳೆ, ಪಾಸ್ ಪೋರ್ಟ್ ಹಾಗೂ ಇತರ ದಾಖಲಾತಿಗಳು ಇದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…