ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ: ಕಲ್ಲಡ್ಕ ಮೇಲ್ಸತುವೆಯಲ್ಲಿ ಕೆಟ್ಟು ಹೋಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿ#ಕ್ಕಿ..!

ಹೊಸದಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳ್ಳಂಬೆಳ್ಳಗೆ ನಡೆದಿದೆ.

ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು, ಆತನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕಂಪೆನಿಯೊಂದರ ಐಸ್‌ಕ್ರೀಮ್ ಸಾಗಿಸುವ ಪ್ರೀಝರ್ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣ ಜಖಂಗೊಂಡಿದೆ. ಕಳೆದ ಎರಡು ದಿನಗಳಿಂದ ಲಾರಿಯೊಂದು ಕಲ್ಲಡ್ಕ ಪ್ಲೈ ಓವರ್ ಮೇಲೆ ಕೆಟ್ಟು ನಿಂತಿದ್ದು, ಲಾರಿ ಚಾಲಕನಿಗೆ ಮುಂಜಾನೆ ವೇಳೆ ಕಣ್ಣಿಗೆ ಕಾಣದೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಹೊಸ ಪ್ಲೈ ಓವರ್‌ನಲ್ಲಿ ಇನ್ನು ಕೂಡ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಬೀದಿ ದೀಪಗಳನ್ನ ಆಳವಡಿಸಲಾಗಿಲ್ಲ. ಜೊತೆಗೆ ಕೆಟ್ಟು ನಿಂತ ಲಾರಿಗೆ ಯಾವುದೇ ಸೂಚನ ಫಲಕ ಕೂಡ ಅಳವಡಿಸಿರಲಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿವೆ. ಇನ್ನು ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!