ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ಹ#*ತ್ಯೆಗೈದ ಸ್ನೇಹಿತರು..!

ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ 40ವರ್ಷದ ವಿನಯ್ ದೇವಾಡಿಗ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ 28ವರ್ಷದ ಅಜಿತ್, 34 ವರ್ಷದ ಅಕ್ಷೇಂದ್ರ ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು, ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವಿನಯ್ ನನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವಿನಯ್ ದೇವಾಡಿಗ, ಮಂಗಳವಾರ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿಗೆ ಹೋಗಿ ಸಂಜೆ 6 ಗಂಟೆಗೆ ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು. ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಾಗ ಆರೋಪಿಗಳು ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಪಟ್ಟರು. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ. ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ಅವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!