ಜನ ಮನದ ನಾಡಿ ಮಿಡಿತ

Advertisement

ಸೋಮೇಶ್ವರ: ಸೋಮೇಶ್ವರದಲ್ಲಿ ಮನೆಯ ಆವರಣ ಗೋಡೆಗೆ ಸ್ಕೂಟರ್ ಢಿಕ್ಕಿ…!

ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ 44ವರ್ಷದ ರಾಘವೇಂದ್ರ ಸಾಲ್ಯಾನ್ ಯಾನೆ ರಘು ಮೃತ ದುರ್ದೈವಿಯಾಗಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ.

 

ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವಾದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಾಘವೇಂದ್ರ ಅವರು ತಾಯಿ,ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!