ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಎನ್ನಿಸಿಕೊಂಡಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ‘ಚೆನ್ನ’ ಎಂಬ ಹೆಸರಿನ ಕೋಣ ಅಸುನೀಗಿದೆ.
ಸುಮಾರು 25 ವರ್ಷ ಪ್ರಾಯದ ಚೆನ್ನ ಕಳೆದ ಮೂರು ವರ್ಷದಿಂದ ವಿಶ್ರಾಂತಿಯಲ್ಲಿದ್ದ. ಇದೀಗ ವಯೋಸಹಜ ಅನಾರೋಗ್ಯದಿಂದ ಸಾವಿನ ಕದ ತೆರೆದಿದ್ದಾನೆ. ಇಂದು ಸಂಜೆ ಚೆನ್ನನ ಅಂತ್ಯಸಂಸ್ಕಾರ ನಡೆದಿದೆ. ಸುಮಾರು 22 ವರ್ಷಗಳ ಹಿಂದೆ ಕಡಂದಲೆ ಕಾಳು ಪಾಣಾರ ಅವರ ಹಟ್ಟಿಯಲ್ಲಿದ್ದ ಆ ಕೋಣವನ್ನು ಬಾರ್ಕೂರು ಶಾಂತಾರಾಮ ಶೆಟ್ಟಿ ಅವರು ತಮ್ಮಲ್ಲಿಗೆ ಕರೆ ತಂದು ಮುದ್ದಿನಿಂದ ಸಾಕಿದ್ದರು. ಬಳಿಕ ಕಂಬಳಕ್ಕಾಗಿ ಚೆನ್ನನನ್ನು ಅಣಿಗೊಳಿಸಿದ್ದರು. ಮೂಡಬಿದಿರೆಯ ಕೋಟಿ-ಚೆನ್ನಯ ಕಂಬಳದ ಗದ್ದೆಗಿಳಿದ ಮೊದಲ ಮೂರು ವರ್ಷವೂ ನೇಗಿಲು ಜೂನಿಯರ್ ವಿಭಾಗದಲ್ಲಿ ಬಾರ್ಕೂರು ಶಾಂತಾರಾಮ ಶೆಟ್ಟರಿಗೆ ಚೆನ್ನ ಮೆಡಲ್ ಬಾಚಿಕೊಟ್ಟಿತು.
ನಂತರ ಸೀನಿಯರ್ ಆಗಿ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟರ ಹಟ್ಟಿಗೆ ತೆರಳಿತು. ತುಸು ತುಂಟ ಪೋಕುರಿಯ ಕೋಣನಾದ್ದರಿಂದ ಕಂಬಳ ಓಟ ಆರಂಭವಾಗುವ ಸಮಯದಲ್ಲಿಯೂ ಪೋಕರಿ ಮಾಡುತ್ತಿತ್ತು. ಇದೇ ಕಾರಣಕ್ಕೆ ಸೀನಿಯರ್ ವಿಭಾಗದಲ್ಲಿ ಒಂದು ವರ್ಷ ನೇಗಿಲು ವಿಭಾಗದಲ್ಲಿ ಚೆನ್ನನನ್ನು ಓಡಿಸಲಾಯಿತು. ಬಳಿಕ ಬಂಟ್ವಾಳದ ಮಹಾಕಾಳಿಬೆಟ್ಟು ಸೀತಾರಾಮ್ ಶೆಟ್ಟಿ ಅವರು ಚೆನ್ನನಿಗೆ ತನ್ನ ಕೋಣವನ್ನು ಜತೆ ಮಾಡಿದ್ದರು. ಆಗಲೇ ಅಲ್ಲಿಪಾದೆ ವಿನ್ಸೆಂಟ್ ಅವರು ಚೆನ್ನನಿಗೆ ಪ್ರೀತಿಯಿಂದ ಆರೈಕೆ ಮಾಡಿ ಕಂಬಳದ ಪಾಠ ಹೇಳಿಕೊಟ್ಟರು. ಅದೇ ವರ್ಷದ ನೇಗಿಲು ಹಿರಿಯ ವಿಭಾಗದಲ್ಲಿ ಚೆನ್ನ ಚಾಂಪಿಯನ್ ಆಗಿ ಹೊರಮ್ಮಿದ್ದನು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…