ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಎನ್ನಿಸಿಕೊಂಡಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ‘ಚೆನ್ನ’ ಎಂಬ ಹೆಸರಿನ ಕೋಣ ಅಸುನೀಗಿದೆ.
ಸುಮಾರು 25 ವರ್ಷ ಪ್ರಾಯದ ಚೆನ್ನ ಕಳೆದ ಮೂರು ವರ್ಷದಿಂದ ವಿಶ್ರಾಂತಿಯಲ್ಲಿದ್ದ. ಇದೀಗ ವಯೋಸಹಜ ಅನಾರೋಗ್ಯದಿಂದ ಸಾವಿನ ಕದ ತೆರೆದಿದ್ದಾನೆ. ಇಂದು ಸಂಜೆ ಚೆನ್ನನ ಅಂತ್ಯಸಂಸ್ಕಾರ ನಡೆದಿದೆ. ಸುಮಾರು 22 ವರ್ಷಗಳ ಹಿಂದೆ ಕಡಂದಲೆ ಕಾಳು ಪಾಣಾರ ಅವರ ಹಟ್ಟಿಯಲ್ಲಿದ್ದ ಆ ಕೋಣವನ್ನು ಬಾರ್ಕೂರು ಶಾಂತಾರಾಮ ಶೆಟ್ಟಿ ಅವರು ತಮ್ಮಲ್ಲಿಗೆ ಕರೆ ತಂದು ಮುದ್ದಿನಿಂದ ಸಾಕಿದ್ದರು. ಬಳಿಕ ಕಂಬಳಕ್ಕಾಗಿ ಚೆನ್ನನನ್ನು ಅಣಿಗೊಳಿಸಿದ್ದರು. ಮೂಡಬಿದಿರೆಯ ಕೋಟಿ-ಚೆನ್ನಯ ಕಂಬಳದ ಗದ್ದೆಗಿಳಿದ ಮೊದಲ ಮೂರು ವರ್ಷವೂ ನೇಗಿಲು ಜೂನಿಯರ್ ವಿಭಾಗದಲ್ಲಿ ಬಾರ್ಕೂರು ಶಾಂತಾರಾಮ ಶೆಟ್ಟರಿಗೆ ಚೆನ್ನ ಮೆಡಲ್ ಬಾಚಿಕೊಟ್ಟಿತು.
ನಂತರ ಸೀನಿಯರ್ ಆಗಿ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟರ ಹಟ್ಟಿಗೆ ತೆರಳಿತು. ತುಸು ತುಂಟ ಪೋಕುರಿಯ ಕೋಣನಾದ್ದರಿಂದ ಕಂಬಳ ಓಟ ಆರಂಭವಾಗುವ ಸಮಯದಲ್ಲಿಯೂ ಪೋಕರಿ ಮಾಡುತ್ತಿತ್ತು. ಇದೇ ಕಾರಣಕ್ಕೆ ಸೀನಿಯರ್ ವಿಭಾಗದಲ್ಲಿ ಒಂದು ವರ್ಷ ನೇಗಿಲು ವಿಭಾಗದಲ್ಲಿ ಚೆನ್ನನನ್ನು ಓಡಿಸಲಾಯಿತು. ಬಳಿಕ ಬಂಟ್ವಾಳದ ಮಹಾಕಾಳಿಬೆಟ್ಟು ಸೀತಾರಾಮ್ ಶೆಟ್ಟಿ ಅವರು ಚೆನ್ನನಿಗೆ ತನ್ನ ಕೋಣವನ್ನು ಜತೆ ಮಾಡಿದ್ದರು. ಆಗಲೇ ಅಲ್ಲಿಪಾದೆ ವಿನ್ಸೆಂಟ್ ಅವರು ಚೆನ್ನನಿಗೆ ಪ್ರೀತಿಯಿಂದ ಆರೈಕೆ ಮಾಡಿ ಕಂಬಳದ ಪಾಠ ಹೇಳಿಕೊಟ್ಟರು. ಅದೇ ವರ್ಷದ ನೇಗಿಲು ಹಿರಿಯ ವಿಭಾಗದಲ್ಲಿ ಚೆನ್ನ ಚಾಂಪಿಯನ್ ಆಗಿ ಹೊರಮ್ಮಿದ್ದನು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…