ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಪಂಪ್ ವೆಲ್ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು.
ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಗಿ, ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿಯವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಸ್ಥಾಪಕರಾದ ರೋಹನ್ ಮೊಂತೆರೋರವರು, ಸ್ವಾತಂತ್ರ್ಯವು ಕೇವಲ ಒಂದು ದಿನದ ಆಚರಣೆಯಲ್ಲ; ಪ್ರತಿದಿನವೂ ಅದನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಯುವ ಪೀಳಿಗೆ ದೇಶಾಭಿವೃದ್ಧಿಯಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ಅವರು ರಾಷ್ಟ್ರಸೇವೆಗೆ ಸಲ್ಲಿಸಿದ ಮಹತ್ತರ ಕೊಡುಗೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿನ ಅವರು ದೇಶ ಸೇವೆ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಗೌರವ ನನ್ನ ನಿವೃತ್ತ ಜೀವನದಲ್ಲೂ ದೇಶಸೇವೆಯ ನೆನಪುಗಳನ್ನು ಮತ್ತಷ್ಟು ಸ್ಮರಣೀಯವಾಗಿಸುತ್ತದೆ. ಓದು, ಉದ್ಯೋಗ, ಹಣ ಇವು ಜೀವನದ ಒಂದು ಭಾಗ ಮಾತ್ರ. ಇಂದಿನ ಯುವ ಪೀಳಿಗೆ ದೇಶಕ್ಕಾಗಿ ಸೇವೆ ಸಲ್ಲಿಸುವ ಧ್ಯೇಯವನ್ನೂ ಹೃದಯದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಡಿಯಾನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಸುಮನಾ ಭಾಗವಹಿಸಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…