ಆ.15 – ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಛೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯವನ್ನು ಪಡೆದಿದ್ದೇವೆ. ಆದರೆ ಫ್ಯಾಸಿಸ್ಟ್ ಕಪಿಮುಷ್ಠಿಯಿಂದ ಭಾರತ ಇನ್ನೂ ಸ್ವತಂತ್ರಗೊಂಡಿಲ್ಲ. ಸ್ವಾತಂತ್ರ್ಯವನ್ನು ರಕ್ಷಿಸಿ ರಾಷ್ಟ್ರವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಮತ್ತಿತರರು ಉಪಸ್ಥಿತರಿದ್ದರು.



