ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ರಸ್ತೆಯ ಮೇಲೆ ತುಂಬಾ ಹಳೆಯದಾದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ.
ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ವಾಹನಗಳು ಸಂಚಾರವಿಲ್ಲದ ಸಮಯದಲ್ಲಿ ಮರ ಬಿದ್ದಿರುವುದರಿಂದ ಅಪಾಯ ತಪ್ಪಿದೆ. ರಜೆಯಾದ ಕಾರಣ ವಾಹನಗಳ ಓಡಾಟ ತುಸು ಕಡಿಮೆಯಿತ್ತು. ಆದರೂ ಮರ ಬೀಳುವ ಸ್ವಲ್ಪವೇ ಮೊದಲು ಲಾರಿ ಸಹಿತ ಘನವಾಹನಗಳು ಮುಂದೆ ಹೋಗಿದ್ದನ್ನು ಸ್ಥಳೀಯರು ನೆನೆಸುತ್ತಾರೆ.
ಸಂಚಾರ ಅಡಚಣೆಯಾಗಿರುವ ಹಿನ್ನಲೆಯಲ್ಲಿ ಸಂಚಾರಮುಕ್ತ ಮಾಡಲು ಸ್ಥಳೀಯರು ಮರಗಳನ್ನು ತೆರವು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…