ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ರಸ್ತೆಯ ಮೇಲೆ ತುಂಬಾ ಹಳೆಯದಾದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ.
ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ವಾಹನಗಳು ಸಂಚಾರವಿಲ್ಲದ ಸಮಯದಲ್ಲಿ ಮರ ಬಿದ್ದಿರುವುದರಿಂದ ಅಪಾಯ ತಪ್ಪಿದೆ. ರಜೆಯಾದ ಕಾರಣ ವಾಹನಗಳ ಓಡಾಟ ತುಸು ಕಡಿಮೆಯಿತ್ತು. ಆದರೂ ಮರ ಬೀಳುವ ಸ್ವಲ್ಪವೇ ಮೊದಲು ಲಾರಿ ಸಹಿತ ಘನವಾಹನಗಳು ಮುಂದೆ ಹೋಗಿದ್ದನ್ನು ಸ್ಥಳೀಯರು ನೆನೆಸುತ್ತಾರೆ.
ಸಂಚಾರ ಅಡಚಣೆಯಾಗಿರುವ ಹಿನ್ನಲೆಯಲ್ಲಿ ಸಂಚಾರಮುಕ್ತ ಮಾಡಲು ಸ್ಥಳೀಯರು ಮರಗಳನ್ನು ತೆರವು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…