ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡುವಂತೆ ಮೂಡಬಿದಿರೆಯ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಖಾಸಗಿ ಬಸ್ನಲ್ಲಿ ಪ್ರಾಯದ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೂಡಬಿದ್ರೆ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಕಾರ್ಕಳ ಅನೆಕೆರೆಯ ತರಕಾರಿ ಅಂಗಡಿ ಕಾರ್ಮಿಕ, ಬೆಳುವಾಯಿ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹ್ಮಾನ ಎನ್ನುವುದು ಪತ್ತೆಯಾಗಿದೆ. ವೈರಲ್ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಆಕೆಯನ್ನು ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿ ರಹ್ಮಾನನನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಆತನಿಗೂ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮಾಹಿತಿ ನೀಡಿದ್ದಾನೆ. ಅದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂದೇಶ್ ಪಿ.ಜಿ. ತಿಳಿಸಿದ್ದಾರೆ. ಆರೋಪಿ ಅಜೆಕಾರ್, ಅನೆಕರೆ ಸುತ್ತಮುತ್ತ ತರಕಾರಿ ಮಾರುತ್ತಿದ್ದು, ಯುವತಿಯರಿಗೆ ಕಿರುಕುಳ ನೀಡುವ ಚಾಳಿ ಇಟ್ಟುಕೊಂಡಿದ್ದ, ಈ ಹಿಂದೆಯೂ ಈತ ಇದೇ ರೀತಿ ವರ್ತಿಸಿದ್ದಾಗಿ ಆರೋಪ ಕೂಡ ಕೇಳಿಬಂದಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…