ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡುವಂತೆ ಮೂಡಬಿದಿರೆಯ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಖಾಸಗಿ ಬಸ್ನಲ್ಲಿ ಪ್ರಾಯದ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೂಡಬಿದ್ರೆ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಕಾರ್ಕಳ ಅನೆಕೆರೆಯ ತರಕಾರಿ ಅಂಗಡಿ ಕಾರ್ಮಿಕ, ಬೆಳುವಾಯಿ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹ್ಮಾನ ಎನ್ನುವುದು ಪತ್ತೆಯಾಗಿದೆ. ವೈರಲ್ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಆಕೆಯನ್ನು ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿ ರಹ್ಮಾನನನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಆತನಿಗೂ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮಾಹಿತಿ ನೀಡಿದ್ದಾನೆ. ಅದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂದೇಶ್ ಪಿ.ಜಿ. ತಿಳಿಸಿದ್ದಾರೆ. ಆರೋಪಿ ಅಜೆಕಾರ್, ಅನೆಕರೆ ಸುತ್ತಮುತ್ತ ತರಕಾರಿ ಮಾರುತ್ತಿದ್ದು, ಯುವತಿಯರಿಗೆ ಕಿರುಕುಳ ನೀಡುವ ಚಾಳಿ ಇಟ್ಟುಕೊಂಡಿದ್ದ, ಈ ಹಿಂದೆಯೂ ಈತ ಇದೇ ರೀತಿ ವರ್ತಿಸಿದ್ದಾಗಿ ಆರೋಪ ಕೂಡ ಕೇಳಿಬಂದಿದೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…