ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡುವಂತೆ ಮೂಡಬಿದಿರೆಯ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಖಾಸಗಿ ಬಸ್ನಲ್ಲಿ ಪ್ರಾಯದ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೂಡಬಿದ್ರೆ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಕಾರ್ಕಳ ಅನೆಕೆರೆಯ ತರಕಾರಿ ಅಂಗಡಿ ಕಾರ್ಮಿಕ, ಬೆಳುವಾಯಿ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹ್ಮಾನ ಎನ್ನುವುದು ಪತ್ತೆಯಾಗಿದೆ. ವೈರಲ್ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಆಕೆಯನ್ನು ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿ ರಹ್ಮಾನನನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಆತನಿಗೂ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮಾಹಿತಿ ನೀಡಿದ್ದಾನೆ. ಅದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂದೇಶ್ ಪಿ.ಜಿ. ತಿಳಿಸಿದ್ದಾರೆ. ಆರೋಪಿ ಅಜೆಕಾರ್, ಅನೆಕರೆ ಸುತ್ತಮುತ್ತ ತರಕಾರಿ ಮಾರುತ್ತಿದ್ದು, ಯುವತಿಯರಿಗೆ ಕಿರುಕುಳ ನೀಡುವ ಚಾಳಿ ಇಟ್ಟುಕೊಂಡಿದ್ದ, ಈ ಹಿಂದೆಯೂ ಈತ ಇದೇ ರೀತಿ ವರ್ತಿಸಿದ್ದಾಗಿ ಆರೋಪ ಕೂಡ ಕೇಳಿಬಂದಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…