ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡುವಂತೆ ಮೂಡಬಿದಿರೆಯ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಖಾಸಗಿ ಬಸ್ನಲ್ಲಿ ಪ್ರಾಯದ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೂಡಬಿದ್ರೆ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಕಾರ್ಕಳ ಅನೆಕೆರೆಯ ತರಕಾರಿ ಅಂಗಡಿ ಕಾರ್ಮಿಕ, ಬೆಳುವಾಯಿ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹ್ಮಾನ ಎನ್ನುವುದು ಪತ್ತೆಯಾಗಿದೆ. ವೈರಲ್ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಆಕೆಯನ್ನು ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿ ರಹ್ಮಾನನನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಆತನಿಗೂ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮಾಹಿತಿ ನೀಡಿದ್ದಾನೆ. ಅದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂದೇಶ್ ಪಿ.ಜಿ. ತಿಳಿಸಿದ್ದಾರೆ. ಆರೋಪಿ ಅಜೆಕಾರ್, ಅನೆಕರೆ ಸುತ್ತಮುತ್ತ ತರಕಾರಿ ಮಾರುತ್ತಿದ್ದು, ಯುವತಿಯರಿಗೆ ಕಿರುಕುಳ ನೀಡುವ ಚಾಳಿ ಇಟ್ಟುಕೊಂಡಿದ್ದ, ಈ ಹಿಂದೆಯೂ ಈತ ಇದೇ ರೀತಿ ವರ್ತಿಸಿದ್ದಾಗಿ ಆರೋಪ ಕೂಡ ಕೇಳಿಬಂದಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…