ಸ್ವಾತಂತ್ರ್ಯ ದಿನದಂದು ಸಂಜೆ ವೇಳೆ ಮೇಯುತ್ತಿದ್ದ ದನವನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ದನದ ಮಾಲೀಕರು ಸಂಶಯ ವ್ಯಕ್ತಪಡಿಸಿದ್ದಾರೆ.
ವಳವೂರು ನಡಿಬೆಟ್ಟು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ದನವನ್ನು ಯಾರೋ ಕಳ್ಳರು ಕಳವು ಮಾಡಿ ಬಳಿಕ ವದೆ ಮಾಡಿರುವ ಬಗ್ಗೆ ದೂರು ನೀಡಿದ್ದಾರೆ. ಇವರ ಬಳಿ 3 ಹಸುಗಳು ಇದ್ದು ಭಾರತ್ ಅಗ್ರೋವೆಟ್ ಸಮೀಪದ ಮೈದಾನದಲ್ಲಿ ಮೇಯುತ್ತಿದ್ದ ಒಂದು ಹಸುವನ್ನು ಕಳವು ಮಾಡಿದ್ದಾರೆ.
ಮೈದಾನದಲ್ಲಿ ಹುಡುಕಾಟ ನಡೆಸಿದಾಗ ಪತ್ತೆಯಾಗದೆ ಇದ್ದು ಬಳಿಕ ನೇತ್ರಾವತಿ ನದಿಗೆ ಸಂಪರ್ಕಿಸುವ ತೋಡು ಬದಿಯಲ್ಲಿ ಪೊದೆಗಳಿಂದ ಕೂಡಿದ ಪ್ರದೇಶದಲ್ಲಿ ದನವನ್ನು ಹತ್ಯೆ ಮಾಡಿ ಮಾಂಸ ಮಾಡಿದ ಕುರುಹುಗಳು ಪತ್ತೆಯಾಗಿವೆ. ಇದೀಗ ಆರೋಪಿಗಳಿಗಾಗಿ ಪೋಲೀಸ್ ತಂಡ ಕಾರ್ಯಚರಣೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…