ಜನ ಮನದ ನಾಡಿ ಮಿಡಿತ

Advertisement

ಪುತ್ತೂರು; ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್..!

 

ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ.

 

 

ರಸ್ತೆಯ ಬದಿಯಲ್ಲಿ ಇಂಟರ್‌ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸೂಫಿ ಇಂತಿಯಾಜ್, ಉಮ್ಮರ್ ಫಾರೂಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪ್ರಸ್ತುತ ನಿವೃತ್ತರಾಗಿರುವ ಇಬ್ರಾಹಿಂ ಅವರ ಸಹೋದರನ ಮಗಳು ನಿಜಿಮಾ ಆಲಿ ಮಾಣಿಪ್ಪಾಡಿ ಅವರ ಹೆಸರಲ್ಲಿರುವ ಈ ಪೆಟ್ರೋಲ್ ಪಂಪ್‌ಗೆ ಗ್ರಾಪಂನಿAದ ಪರವಾನಿಗೆ ಇಲ್ಲ. ಹಾಗಿದ್ದರೂ ಅನಧಿಕೃತವಾಗಿ ಇದನ್ನು ಪೆಂಟ್ರೋಲ್ ಪಂಪ್‌ನ್ನು ನಡೆಸಲಾಗುತ್ತಿದೆ.

ರಾಜ್ಯ ಹೆದ್ದಾರಿಯಿಂದ ಕನಿಷ್ಟ ೪೦ ಮೀಟರ್ ಬಿಟ್ಟು ಕಟ್ಟಡ ನಿರ್ಮಾಣ ಮಾಡಬೇಕು ಎಂಬುವುದು ಕಡ್ಡಾಯವಾದ ನಿಯಮ. ಆದರೆ ಈ ಪೆಟ್ರೋಲ್ ಪಂಪು ರಸ್ತೆಯಿಂದ ಕೇವಲ ೨೦ ಮೀಟರ್ ದೂರದಲ್ಲಿ ನಿರ್ಮಿಸಲಾಗಿದೆ. ಅನಧಿಕೃತವಾದ ಮಾನದಂಡವನ್ನೇ ಪಾಲಿಸದೆ ನಿರ್ಮಿಸಲಾಗಿರುವ ಈ ಪೆಟ್ರೋಲ್ ಪಂಪ್ ಬಗ್ಗೆ ಯಾವುದೇ ಇಲಾಖೆಯೂ ತಲೆಕೆಡಿಸಿಕೊಂಡಿಲ್ಲ. ಬಡವರ್ಗದ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಗೂಡಂಗಡಿ ಹಾಕಿದರೆ ತಕ್ಷಣ ತೆಗೆದು ಬಿಸಾಡುವ ಅಧಿಕಾರಿಗಳು ಈ ಕಟ್ಟಡ ಅನಧಿಕೃತವಾಗಿದ್ದರೂ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್, ಅಬ್ದುಲ್ ಜವಾದ್, ಶಮೀಮ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!