ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ.
ರಸ್ತೆಯ ಬದಿಯಲ್ಲಿ ಇಂಟರ್ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸೂಫಿ ಇಂತಿಯಾಜ್, ಉಮ್ಮರ್ ಫಾರೂಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪ್ರಸ್ತುತ ನಿವೃತ್ತರಾಗಿರುವ ಇಬ್ರಾಹಿಂ ಅವರ ಸಹೋದರನ ಮಗಳು ನಿಜಿಮಾ ಆಲಿ ಮಾಣಿಪ್ಪಾಡಿ ಅವರ ಹೆಸರಲ್ಲಿರುವ ಈ ಪೆಟ್ರೋಲ್ ಪಂಪ್ಗೆ ಗ್ರಾಪಂನಿAದ ಪರವಾನಿಗೆ ಇಲ್ಲ. ಹಾಗಿದ್ದರೂ ಅನಧಿಕೃತವಾಗಿ ಇದನ್ನು ಪೆಂಟ್ರೋಲ್ ಪಂಪ್ನ್ನು ನಡೆಸಲಾಗುತ್ತಿದೆ.
ರಾಜ್ಯ ಹೆದ್ದಾರಿಯಿಂದ ಕನಿಷ್ಟ ೪೦ ಮೀಟರ್ ಬಿಟ್ಟು ಕಟ್ಟಡ ನಿರ್ಮಾಣ ಮಾಡಬೇಕು ಎಂಬುವುದು ಕಡ್ಡಾಯವಾದ ನಿಯಮ. ಆದರೆ ಈ ಪೆಟ್ರೋಲ್ ಪಂಪು ರಸ್ತೆಯಿಂದ ಕೇವಲ ೨೦ ಮೀಟರ್ ದೂರದಲ್ಲಿ ನಿರ್ಮಿಸಲಾಗಿದೆ. ಅನಧಿಕೃತವಾದ ಮಾನದಂಡವನ್ನೇ ಪಾಲಿಸದೆ ನಿರ್ಮಿಸಲಾಗಿರುವ ಈ ಪೆಟ್ರೋಲ್ ಪಂಪ್ ಬಗ್ಗೆ ಯಾವುದೇ ಇಲಾಖೆಯೂ ತಲೆಕೆಡಿಸಿಕೊಂಡಿಲ್ಲ. ಬಡವರ್ಗದ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಗೂಡಂಗಡಿ ಹಾಕಿದರೆ ತಕ್ಷಣ ತೆಗೆದು ಬಿಸಾಡುವ ಅಧಿಕಾರಿಗಳು ಈ ಕಟ್ಟಡ ಅನಧಿಕೃತವಾಗಿದ್ದರೂ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್, ಅಬ್ದುಲ್ ಜವಾದ್, ಶಮೀಮ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…