ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ.
ರಸ್ತೆಯ ಬದಿಯಲ್ಲಿ ಇಂಟರ್ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸೂಫಿ ಇಂತಿಯಾಜ್, ಉಮ್ಮರ್ ಫಾರೂಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪ್ರಸ್ತುತ ನಿವೃತ್ತರಾಗಿರುವ ಇಬ್ರಾಹಿಂ ಅವರ ಸಹೋದರನ ಮಗಳು ನಿಜಿಮಾ ಆಲಿ ಮಾಣಿಪ್ಪಾಡಿ ಅವರ ಹೆಸರಲ್ಲಿರುವ ಈ ಪೆಟ್ರೋಲ್ ಪಂಪ್ಗೆ ಗ್ರಾಪಂನಿAದ ಪರವಾನಿಗೆ ಇಲ್ಲ. ಹಾಗಿದ್ದರೂ ಅನಧಿಕೃತವಾಗಿ ಇದನ್ನು ಪೆಂಟ್ರೋಲ್ ಪಂಪ್ನ್ನು ನಡೆಸಲಾಗುತ್ತಿದೆ.
ರಾಜ್ಯ ಹೆದ್ದಾರಿಯಿಂದ ಕನಿಷ್ಟ ೪೦ ಮೀಟರ್ ಬಿಟ್ಟು ಕಟ್ಟಡ ನಿರ್ಮಾಣ ಮಾಡಬೇಕು ಎಂಬುವುದು ಕಡ್ಡಾಯವಾದ ನಿಯಮ. ಆದರೆ ಈ ಪೆಟ್ರೋಲ್ ಪಂಪು ರಸ್ತೆಯಿಂದ ಕೇವಲ ೨೦ ಮೀಟರ್ ದೂರದಲ್ಲಿ ನಿರ್ಮಿಸಲಾಗಿದೆ. ಅನಧಿಕೃತವಾದ ಮಾನದಂಡವನ್ನೇ ಪಾಲಿಸದೆ ನಿರ್ಮಿಸಲಾಗಿರುವ ಈ ಪೆಟ್ರೋಲ್ ಪಂಪ್ ಬಗ್ಗೆ ಯಾವುದೇ ಇಲಾಖೆಯೂ ತಲೆಕೆಡಿಸಿಕೊಂಡಿಲ್ಲ. ಬಡವರ್ಗದ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಗೂಡಂಗಡಿ ಹಾಕಿದರೆ ತಕ್ಷಣ ತೆಗೆದು ಬಿಸಾಡುವ ಅಧಿಕಾರಿಗಳು ಈ ಕಟ್ಟಡ ಅನಧಿಕೃತವಾಗಿದ್ದರೂ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್, ಅಬ್ದುಲ್ ಜವಾದ್, ಶಮೀಮ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…