ಮದ್ಯಪಾನ ಮಾಡಿದ ಮತ್ತಿನಲ್ಲಿ ತಂದೆಯನ್ನ ಚಾ*ಕುವಿನಿಂದ ಇ*ರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಮಂಜುನಾಥ್ ಮಗನಿಂದಲೇ ಕೊಲೆಯಾದ ದುರ್ದೈವಿ. ರಂಜನ್ ಎಂಬಾತ ಕೊ*ಲೆಗೈದ ಆರೋಪಿಯಾಗಿದ್ದಾನೆ. ಪೋಷಕರ ನಡುವೆ ನಡೆದ ಗಲಾಟೆ ತಾರಕಕ್ಕೇರಿ ಈ ಕೃತ್ಯ ಎಸಗಿದ ಆರೋಪಿ ಬಳಿಕ ತಂದೆಯ ಅಂತ್ಯಸಂಸ್ಕಾರಕ್ಕೆ ಕೂಡಾ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಆರೋಪಿ ರಂಜನ್ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಈ ವೇಳೆ ತಂದೆ-ತಾಯಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ಬಿಡಿಸಲು ಹೋದ ರಂಜನ್, ತಂದೆಗೆ ಹಿಂದಿನಿAದ ಚಾಕು ಇರಿದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಆದ ಗಾಯಕ್ಕೆ ಅರಿಶಿನ ಪುಡಿ ಹಚ್ಚಿ ಮಲಗಿಸಿದ್ದಾರೆ. ರಕ್ತ*ಸ್ರಾವ ಹೆಚ್ಚಾಗಿ ಮಂಜುನಾಥ್ ಸಾವನ್ನಪ್ಪಿದ್ದಾರೆ. ಈ ನಡುವೆ ರಂಜನ್ ಒಬ್ಬೊಬ್ಬರ ಬಳಿ ಒಂದೊಂದು ಕಥೆ ಕಟ್ಟಿದ್ದಾನೆ. ತಂದೆ-ತಾಯಿ ಜಗಳದಲ್ಲಿ ನಾನು ಬಿಡಿಸುವ ವೇಳೆ ತಂದೆಗೆ ಮಚ್ಚು ತಾಗಿ ಗಾಯವಾಗಿ ತೀರಿಕೊಂಡ್ರು ಎಂದು ಕೆಲವರ ಬಳಿ ಹೇಳಿದ್ದನಂತೆ. ಇನ್ನೂ ಕೆಲವರ ಬಳಿ ತಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕತೆ ಕಟ್ಟಿದ್ದ. ಆರೋಪಿಯ ಕಥೆ ಕೇಳಿದ್ದವರು ನಿಜವೆಂದು ಮಂಜುನಾಥ್ ಶ*ವ ಸಂಸ್ಕಾರಕ್ಕೆ ತಯಾರಿ ಮಾಡಿಕೊಂಡಿದ್ದರು. ಪ್ರಕರಣದ ಮಾಹಿತಿ ಪಡೆದ ಆಲ್ದೂರು ಪೊಲೀಸರು, ಅನುಮಾನದ ಮೇಲೆ, ರಂಜನ್ನನ್ನು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…