ಇತರೆ

ಚಿಕ್ಕಮಗಳೂರು; ಚೂರಿಯಿಂದ ಇರಿದು ತಂದೆಯನ್ನು ಕೊಂ*ದ ಕುಡುಕ ಮಗ

 

ಮದ್ಯಪಾನ ಮಾಡಿದ ಮತ್ತಿನಲ್ಲಿ ತಂದೆಯನ್ನ ಚಾ*ಕುವಿನಿಂದ ಇ*ರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಮಂಜುನಾಥ್ ಮಗನಿಂದಲೇ ಕೊಲೆಯಾದ ದುರ್ದೈವಿ. ರಂಜನ್ ಎಂಬಾತ ಕೊ*ಲೆಗೈದ ಆರೋಪಿಯಾಗಿದ್ದಾನೆ. ಪೋಷಕರ ನಡುವೆ ನಡೆದ ಗಲಾಟೆ ತಾರಕಕ್ಕೇರಿ ಈ ಕೃತ್ಯ ಎಸಗಿದ ಆರೋಪಿ ಬಳಿಕ ತಂದೆಯ ಅಂತ್ಯಸಂಸ್ಕಾರಕ್ಕೆ ಕೂಡಾ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಆರೋಪಿ ರಂಜನ್ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಈ ವೇಳೆ ತಂದೆ-ತಾಯಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ಬಿಡಿಸಲು ಹೋದ ರಂಜನ್, ತಂದೆಗೆ ಹಿಂದಿನಿAದ ಚಾಕು ಇರಿದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಆದ ಗಾಯಕ್ಕೆ ಅರಿಶಿನ ಪುಡಿ ಹಚ್ಚಿ ಮಲಗಿಸಿದ್ದಾರೆ. ರಕ್ತ*ಸ್ರಾವ ಹೆಚ್ಚಾಗಿ ಮಂಜುನಾಥ್ ಸಾವನ್ನಪ್ಪಿದ್ದಾರೆ. ಈ ನಡುವೆ ರಂಜನ್ ಒಬ್ಬೊಬ್ಬರ ಬಳಿ ಒಂದೊಂದು ಕಥೆ ಕಟ್ಟಿದ್ದಾನೆ. ತಂದೆ-ತಾಯಿ ಜಗಳದಲ್ಲಿ ನಾನು ಬಿಡಿಸುವ ವೇಳೆ ತಂದೆಗೆ ಮಚ್ಚು ತಾಗಿ ಗಾಯವಾಗಿ ತೀರಿಕೊಂಡ್ರು ಎಂದು ಕೆಲವರ ಬಳಿ ಹೇಳಿದ್ದನಂತೆ. ಇನ್ನೂ ಕೆಲವರ ಬಳಿ ತಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕತೆ ಕಟ್ಟಿದ್ದ. ಆರೋಪಿಯ ಕಥೆ ಕೇಳಿದ್ದವರು ನಿಜವೆಂದು ಮಂಜುನಾಥ್ ಶ*ವ ಸಂಸ್ಕಾರಕ್ಕೆ ತಯಾರಿ ಮಾಡಿಕೊಂಡಿದ್ದರು. ಪ್ರಕರಣದ ಮಾಹಿತಿ ಪಡೆದ ಆಲ್ದೂರು ಪೊಲೀಸರು, ಅನುಮಾನದ ಮೇಲೆ, ರಂಜನ್‌ನನ್ನು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

3 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago