ಮದ್ಯಪಾನ ಮಾಡಿದ ಮತ್ತಿನಲ್ಲಿ ತಂದೆಯನ್ನ ಚಾ*ಕುವಿನಿಂದ ಇ*ರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಮಂಜುನಾಥ್ ಮಗನಿಂದಲೇ ಕೊಲೆಯಾದ ದುರ್ದೈವಿ. ರಂಜನ್ ಎಂಬಾತ ಕೊ*ಲೆಗೈದ ಆರೋಪಿಯಾಗಿದ್ದಾನೆ. ಪೋಷಕರ ನಡುವೆ ನಡೆದ ಗಲಾಟೆ ತಾರಕಕ್ಕೇರಿ ಈ ಕೃತ್ಯ ಎಸಗಿದ ಆರೋಪಿ ಬಳಿಕ ತಂದೆಯ ಅಂತ್ಯಸಂಸ್ಕಾರಕ್ಕೆ ಕೂಡಾ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಆರೋಪಿ ರಂಜನ್ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಈ ವೇಳೆ ತಂದೆ-ತಾಯಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ಬಿಡಿಸಲು ಹೋದ ರಂಜನ್, ತಂದೆಗೆ ಹಿಂದಿನಿAದ ಚಾಕು ಇರಿದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಆದ ಗಾಯಕ್ಕೆ ಅರಿಶಿನ ಪುಡಿ ಹಚ್ಚಿ ಮಲಗಿಸಿದ್ದಾರೆ. ರಕ್ತ*ಸ್ರಾವ ಹೆಚ್ಚಾಗಿ ಮಂಜುನಾಥ್ ಸಾವನ್ನಪ್ಪಿದ್ದಾರೆ. ಈ ನಡುವೆ ರಂಜನ್ ಒಬ್ಬೊಬ್ಬರ ಬಳಿ ಒಂದೊಂದು ಕಥೆ ಕಟ್ಟಿದ್ದಾನೆ. ತಂದೆ-ತಾಯಿ ಜಗಳದಲ್ಲಿ ನಾನು ಬಿಡಿಸುವ ವೇಳೆ ತಂದೆಗೆ ಮಚ್ಚು ತಾಗಿ ಗಾಯವಾಗಿ ತೀರಿಕೊಂಡ್ರು ಎಂದು ಕೆಲವರ ಬಳಿ ಹೇಳಿದ್ದನಂತೆ. ಇನ್ನೂ ಕೆಲವರ ಬಳಿ ತಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕತೆ ಕಟ್ಟಿದ್ದ. ಆರೋಪಿಯ ಕಥೆ ಕೇಳಿದ್ದವರು ನಿಜವೆಂದು ಮಂಜುನಾಥ್ ಶ*ವ ಸಂಸ್ಕಾರಕ್ಕೆ ತಯಾರಿ ಮಾಡಿಕೊಂಡಿದ್ದರು. ಪ್ರಕರಣದ ಮಾಹಿತಿ ಪಡೆದ ಆಲ್ದೂರು ಪೊಲೀಸರು, ಅನುಮಾನದ ಮೇಲೆ, ರಂಜನ್ನನ್ನು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…