ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ.
ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಈತನ ಜೊತೆ ಸ್ನೇಹಿತರಾದ ಸಿಬಿನ್, ಸಯ್ಯದ್ ಮಹಮ್ಮದ್ ಆಲ್ ಅಮೀನ್ ಎಂಬವರು ಕೂಡ ಕಾರಿನಲ್ಲಿ ಇದ್ದರು. ಕೇರಳ ರಾಜ್ಯದ ಮಂಜೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಯಾಗಿರುವ ಈತ ಹಳೆಯ ಆರೋಪಿ ಕೂಡ ಆಗಿದ್ದ ಎನ್ನಲಾಗಿದೆ.
ಹಾಗಾಗಿ ಪೋಲೀಸರ ತಂಡ ಈತನನ್ನು ಬಂಧನಕ್ಕೆ ಬಲೆ ಬೀಸಿತ್ತು. ಈತನ ಕಾರು ಬಂಟ್ವಾಳದ ಕಡೆ ಹೋಗುತ್ತಿರುವ ಖಚಿತ ಮಾಹಿತಿ ಪಡೆದ ಕೇರಳ ಪೋಲೀಸರ ತಂಡ ಈತನ ಬೆನ್ನ ಹಿಂದೆ ಬಿದ್ದಿದ್ದರು. ಪೋಲೀಸರ ಬೇಟೆಯ ವಿಚಾರ ತಿಳಿದ ಈತ ಅತಿಯಾದ ವೇಗದೊಂದಿಗೆ ಬಂದು ಮಂಚಿಯ ಮೋಂತಿಮಾರು ಎಂಬಲ್ಲಿ ಕೇರಳ ಮೂಲದ ಆಲ್ಟೊ ಕಾರೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಆದರೆ ಪೋಲೀಸರ ಸಮಯ ಪ್ರಜ್ಞೆಯಿಂದ ಈತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದು, ಅಪಘಾತ ಪ್ರಕರಣ ದಾಖಲಾಗುತ್ತಾ ಎಂದು ಇನ್ನಷ್ಟೇ ಗೊತ್ತಾಗಬೇಕಿದೆ.
ಮಂಚಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬ ಹೆಚ್ಚಿನ ಮಾಹಿತಿ ದೊರಯಬೇಕಷ್ಟೇ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…