ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ.
ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಈತನ ಜೊತೆ ಸ್ನೇಹಿತರಾದ ಸಿಬಿನ್, ಸಯ್ಯದ್ ಮಹಮ್ಮದ್ ಆಲ್ ಅಮೀನ್ ಎಂಬವರು ಕೂಡ ಕಾರಿನಲ್ಲಿ ಇದ್ದರು. ಕೇರಳ ರಾಜ್ಯದ ಮಂಜೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಯಾಗಿರುವ ಈತ ಹಳೆಯ ಆರೋಪಿ ಕೂಡ ಆಗಿದ್ದ ಎನ್ನಲಾಗಿದೆ.
ಹಾಗಾಗಿ ಪೋಲೀಸರ ತಂಡ ಈತನನ್ನು ಬಂಧನಕ್ಕೆ ಬಲೆ ಬೀಸಿತ್ತು. ಈತನ ಕಾರು ಬಂಟ್ವಾಳದ ಕಡೆ ಹೋಗುತ್ತಿರುವ ಖಚಿತ ಮಾಹಿತಿ ಪಡೆದ ಕೇರಳ ಪೋಲೀಸರ ತಂಡ ಈತನ ಬೆನ್ನ ಹಿಂದೆ ಬಿದ್ದಿದ್ದರು. ಪೋಲೀಸರ ಬೇಟೆಯ ವಿಚಾರ ತಿಳಿದ ಈತ ಅತಿಯಾದ ವೇಗದೊಂದಿಗೆ ಬಂದು ಮಂಚಿಯ ಮೋಂತಿಮಾರು ಎಂಬಲ್ಲಿ ಕೇರಳ ಮೂಲದ ಆಲ್ಟೊ ಕಾರೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಆದರೆ ಪೋಲೀಸರ ಸಮಯ ಪ್ರಜ್ಞೆಯಿಂದ ಈತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದು, ಅಪಘಾತ ಪ್ರಕರಣ ದಾಖಲಾಗುತ್ತಾ ಎಂದು ಇನ್ನಷ್ಟೇ ಗೊತ್ತಾಗಬೇಕಿದೆ.
ಮಂಚಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬ ಹೆಚ್ಚಿನ ಮಾಹಿತಿ ದೊರಯಬೇಕಷ್ಟೇ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…