ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ.
ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಈತನ ಜೊತೆ ಸ್ನೇಹಿತರಾದ ಸಿಬಿನ್, ಸಯ್ಯದ್ ಮಹಮ್ಮದ್ ಆಲ್ ಅಮೀನ್ ಎಂಬವರು ಕೂಡ ಕಾರಿನಲ್ಲಿ ಇದ್ದರು. ಕೇರಳ ರಾಜ್ಯದ ಮಂಜೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಯಾಗಿರುವ ಈತ ಹಳೆಯ ಆರೋಪಿ ಕೂಡ ಆಗಿದ್ದ ಎನ್ನಲಾಗಿದೆ.
ಹಾಗಾಗಿ ಪೋಲೀಸರ ತಂಡ ಈತನನ್ನು ಬಂಧನಕ್ಕೆ ಬಲೆ ಬೀಸಿತ್ತು. ಈತನ ಕಾರು ಬಂಟ್ವಾಳದ ಕಡೆ ಹೋಗುತ್ತಿರುವ ಖಚಿತ ಮಾಹಿತಿ ಪಡೆದ ಕೇರಳ ಪೋಲೀಸರ ತಂಡ ಈತನ ಬೆನ್ನ ಹಿಂದೆ ಬಿದ್ದಿದ್ದರು. ಪೋಲೀಸರ ಬೇಟೆಯ ವಿಚಾರ ತಿಳಿದ ಈತ ಅತಿಯಾದ ವೇಗದೊಂದಿಗೆ ಬಂದು ಮಂಚಿಯ ಮೋಂತಿಮಾರು ಎಂಬಲ್ಲಿ ಕೇರಳ ಮೂಲದ ಆಲ್ಟೊ ಕಾರೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಆದರೆ ಪೋಲೀಸರ ಸಮಯ ಪ್ರಜ್ಞೆಯಿಂದ ಈತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದು, ಅಪಘಾತ ಪ್ರಕರಣ ದಾಖಲಾಗುತ್ತಾ ಎಂದು ಇನ್ನಷ್ಟೇ ಗೊತ್ತಾಗಬೇಕಿದೆ.
ಮಂಚಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬ ಹೆಚ್ಚಿನ ಮಾಹಿತಿ ದೊರಯಬೇಕಷ್ಟೇ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…