ಜನ ಮನದ ನಾಡಿ ಮಿಡಿತ

Advertisement

ಮಂಗಳೂರು; ಯಕ್ಷ ಧ್ರುವ ಪಟ್ಲ 20 ಲಕ್ಷ ಅಂಚೆ ಅಪಘಾತ ವಿಮಾ ಪರಿಹಾರ ವಿತರಣೆ

ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು ಪ್ರವೀತ್ ಅವರ ಕುಟುಂಬಗಳಿಗೆ ತಲಾ ರೂ.ಹತ್ತು ಲಕ್ಷದ ವಿಮಾ ಪರಿಹಾರವನ್ನು ವಿತರಣೆ ಮಾಡಲಾಯಿತು.

ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠ ಇಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪರಿಹಾರ ಮೊತ್ತದ ಚೆಕ್ ನ್ನು ವಿತರಿಸಿದ್ದಾರೆ. ಪಟ್ಲ ಫೌಂಡೇಶನ್ ಮೂಲಕ ಎಲ್ಲಾ ಕ್ಷೇತ್ರದ ಕಲಾವಿದರಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಬಹಳಷ್ಟು ಕಲಾವಿದರಿಗೆ ಮತ್ತು ಕುಟುಂಬದವರಿಗೆ ಪ್ರಯೋಜನವಾಗಿದೆ ಎಂದ್ರು. ಪಟ್ಲ ಫೌಂಡೇಶನ್ ನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಐ ಪಿ ಪಿ ಬಿ ರೀಜನಲ್ ಮ್ಯಾನೇಜರ್ ಶ್ರೀನಿವಾಸ ಹೊಸಮನಿ, ಉಪ ಅಂಚೆ ಅಧೀಕ್ಷಕ ದಿನೇಶ್ ಪಿ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರೀಯ ವಿದ್ಯಾಲಯಗಳ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅನೇಕ ಪದಕಗಳ ಸಾಧನೆ ಮಾಡಿದ ಅಂಚೆ ಅಧೀಕ್ಷಕರ ಕಚೇರಿ ಸಿಬ್ಬಂದಿ ಅಶ್ವಿನಿ ಮತ್ತು ಅಭಿಜಿತ್ ನಾಯ್ಕ್ ಅವರ ಸುಪುತ್ರ ತನಯ ಅವರನ್ನು ಹಾಗೂ ಅಂಚೆ ಉಳಿತಾಯ ಖಾತೆಗಳಲ್ಲಿ ಗಣನೀಯ ಸಾಧನೆಮಾಡಿದ ಅಂಚೆ ಸಿಬ್ಬಂದಿಗಳನ್ನು ಸಮ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಐಪಿಪಿಬಿಯ ಸುಬ್ರಮಣ್ಯಂ, ಸಿಹಾಸ್, ಆದಿತ್ಯ ಬಿರ್ಲಾದ ರಮೇಶ್ ಅನಂತುಲಾ, ರಿಲಯೆನ್ಸ್ ನ ನಟರಾಜ್, ಅಂಚೆ ನಿರೀಕ್ಷಕರಾದ ಪ್ರದೀಪ್ ಭಂಡಾರಿ, ಸುಪ್ರಿಯಾ ಮೊದಲಾದವರು ಉಪಸ್ಥಿತರಿದ್ದರು. ಉಪ ಅಧೀಕ್ಷಕ ದಿನೇಶ್ ಪಿ ಸ್ವಾಗತಿಸಿ ಸುಭಾಷ್ ಸಾಲಿಯಾನ್ ರವರು ವಂದಿಸಿದರು. ಕಾರ್ಯಕ್ರಮವನ್ನು ದಯಾನಂದ ಪಿ ಕತ್ತಲಸಾರ್ ನಿರೂಪಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!