ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು ಪ್ರವೀತ್ ಅವರ ಕುಟುಂಬಗಳಿಗೆ ತಲಾ ರೂ.ಹತ್ತು ಲಕ್ಷದ ವಿಮಾ ಪರಿಹಾರವನ್ನು ವಿತರಣೆ ಮಾಡಲಾಯಿತು.
ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠ ಇಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪರಿಹಾರ ಮೊತ್ತದ ಚೆಕ್ ನ್ನು ವಿತರಿಸಿದ್ದಾರೆ. ಪಟ್ಲ ಫೌಂಡೇಶನ್ ಮೂಲಕ ಎಲ್ಲಾ ಕ್ಷೇತ್ರದ ಕಲಾವಿದರಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಬಹಳಷ್ಟು ಕಲಾವಿದರಿಗೆ ಮತ್ತು ಕುಟುಂಬದವರಿಗೆ ಪ್ರಯೋಜನವಾಗಿದೆ ಎಂದ್ರು. ಪಟ್ಲ ಫೌಂಡೇಶನ್ ನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಐ ಪಿ ಪಿ ಬಿ ರೀಜನಲ್ ಮ್ಯಾನೇಜರ್ ಶ್ರೀನಿವಾಸ ಹೊಸಮನಿ, ಉಪ ಅಂಚೆ ಅಧೀಕ್ಷಕ ದಿನೇಶ್ ಪಿ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರೀಯ ವಿದ್ಯಾಲಯಗಳ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅನೇಕ ಪದಕಗಳ ಸಾಧನೆ ಮಾಡಿದ ಅಂಚೆ ಅಧೀಕ್ಷಕರ ಕಚೇರಿ ಸಿಬ್ಬಂದಿ ಅಶ್ವಿನಿ ಮತ್ತು ಅಭಿಜಿತ್ ನಾಯ್ಕ್ ಅವರ ಸುಪುತ್ರ ತನಯ ಅವರನ್ನು ಹಾಗೂ ಅಂಚೆ ಉಳಿತಾಯ ಖಾತೆಗಳಲ್ಲಿ ಗಣನೀಯ ಸಾಧನೆಮಾಡಿದ ಅಂಚೆ ಸಿಬ್ಬಂದಿಗಳನ್ನು ಸಮ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಐಪಿಪಿಬಿಯ ಸುಬ್ರಮಣ್ಯಂ, ಸಿಹಾಸ್, ಆದಿತ್ಯ ಬಿರ್ಲಾದ ರಮೇಶ್ ಅನಂತುಲಾ, ರಿಲಯೆನ್ಸ್ ನ ನಟರಾಜ್, ಅಂಚೆ ನಿರೀಕ್ಷಕರಾದ ಪ್ರದೀಪ್ ಭಂಡಾರಿ, ಸುಪ್ರಿಯಾ ಮೊದಲಾದವರು ಉಪಸ್ಥಿತರಿದ್ದರು. ಉಪ ಅಧೀಕ್ಷಕ ದಿನೇಶ್ ಪಿ ಸ್ವಾಗತಿಸಿ ಸುಭಾಷ್ ಸಾಲಿಯಾನ್ ರವರು ವಂದಿಸಿದರು. ಕಾರ್ಯಕ್ರಮವನ್ನು ದಯಾನಂದ ಪಿ ಕತ್ತಲಸಾರ್ ನಿರೂಪಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…