ಜನ ಮನದ ನಾಡಿ ಮಿಡಿತ

Advertisement

ತೋಕೂರು ಸ್ಫೋರ್ಟ್ಸ್ ಕ್ಲಬ್: ವನ ಮಹೋತ್ಸವ ಆಚರಣೆ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು, ಮತ್ತು ಜಿಲ್ಲಾ ಯುವಜನ ಒಕ್ಕೂಟ ದ ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆ, ತೋಕೂರು ಇದರ ಸಹಕಾರದಲ್ಲಿ ಜಿಲ್ಲಾ, ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್(ರಿ)ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ದಿನಾಂಕ 23/07/2023ನೇ ಆದಿತ್ಯವಾರ ಬೆಳಿಗ್ಗೆ ಘಂಟೆ 7.30 ರಿಂದ ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆ,ತೋಕೂರು ಇಲ್ಲಿನ ವಠಾರದಲ್ಲಿ ಚೇರಿ, ಮತ್ತು ಬಾದಾಮ್ ಗಿಡಗಳನ್ನು ನೆಡುವುದರ ಮೂಲಕ ಹಾಗೂ ಕಳೆದ ಬಾರಿ ನೆಟ್ಟಿರುವ ಗಿಡಗಳಿಗೆ ಕಟ್ಟೆ ಬಿಡಿಸಿ, ಗೊಬ್ಬರ ಹಾಕಿ ಆರೈಕೆ ಮಾಡುವುದರೊಂದಿಗೆ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್ ಇವರು “ವನಮಹೋತ್ಸವ ಮತ್ತು ಪರಿಸರ ಸಂರಕ್ಷಣೆ ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಶ್ರೀ ಸಂತೋಷ್ ಕುಮಾರ್, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಉಪಾಧ್ಯಕ್ಷ ಶ್ರೀ ಸುನಿಲ್ ದೇವಾಡಿಗ ,ಪ್ರಧಾನ ಕಾರ್ಯದರ್ಶಿ ಶ್ರೀ ದೀಪಕ್ ಸುವರ್ಣ, ಕಾರ್ಯಾಧ್ಯಕ್ಷ ಶ್ರೀ ಸಂತೋಷ್ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧಾ ದೇವಾಡಿಗ, ಪರಿಸರ ಸಂರಕ್ಷಣಾ ಕಾರ್ಯದರ್ಶಿ ಶ್ರೀ ಜಗದೀಶ್ ಕೋಟ್ಯಾನ್,ಕ್ಲಬ್ ನ ಕ್ರಿಕೆಟ್ ತಂಡದ ನಾಯಕ ಶ್ರೀ ಗೌತಮ್ ಬೆಲ್ಚೆಡ್, ಸದಸ್ಯರಾದ ಶ್ರೀ ಚಂದ್ರಶೇಖರ ದೇವಾಡಿಗ, ಶ್ರೀ ಚಂದ್ರ ಸುವರ್ಣ ಶ್ರೀ ಸೋಮನಾಥ್, ಮಹಿಳಾ ಸದಸ್ಯೆಯರಾದ ಶ್ರೀಮತಿ ಪ್ರಮೀಳಾ.ಕೆ.ದೇವಾಡಿಗ, ಶ್ರೀಮತಿ ಸರಿತಾ ಹಾಗೂ ಮತ್ತಿತರರು ಭಾಗವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!