ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು, ಮತ್ತು ಜಿಲ್ಲಾ ಯುವಜನ ಒಕ್ಕೂಟ ದ ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆ, ತೋಕೂರು ಇದರ ಸಹಕಾರದಲ್ಲಿ ಜಿಲ್ಲಾ, ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್(ರಿ)ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ದಿನಾಂಕ 23/07/2023ನೇ ಆದಿತ್ಯವಾರ ಬೆಳಿಗ್ಗೆ ಘಂಟೆ 7.30 ರಿಂದ ಸರಕಾರಿ ಹಿರಿಯ ಪ್ರಾಥಮಿಕ ಹಿಂದೂಸ್ಥಾನಿ ಶಾಲೆ,ತೋಕೂರು ಇಲ್ಲಿನ ವಠಾರದಲ್ಲಿ ಚೇರಿ, ಮತ್ತು ಬಾದಾಮ್ ಗಿಡಗಳನ್ನು ನೆಡುವುದರ ಮೂಲಕ ಹಾಗೂ ಕಳೆದ ಬಾರಿ ನೆಟ್ಟಿರುವ ಗಿಡಗಳಿಗೆ ಕಟ್ಟೆ ಬಿಡಿಸಿ, ಗೊಬ್ಬರ ಹಾಕಿ ಆರೈಕೆ ಮಾಡುವುದರೊಂದಿಗೆ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್ ಇವರು “ವನಮಹೋತ್ಸವ ಮತ್ತು ಪರಿಸರ ಸಂರಕ್ಷಣೆ ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಶ್ರೀ ಸಂತೋಷ್ ಕುಮಾರ್, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಉಪಾಧ್ಯಕ್ಷ ಶ್ರೀ ಸುನಿಲ್ ದೇವಾಡಿಗ ,ಪ್ರಧಾನ ಕಾರ್ಯದರ್ಶಿ ಶ್ರೀ ದೀಪಕ್ ಸುವರ್ಣ, ಕಾರ್ಯಾಧ್ಯಕ್ಷ ಶ್ರೀ ಸಂತೋಷ್ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧಾ ದೇವಾಡಿಗ, ಪರಿಸರ ಸಂರಕ್ಷಣಾ ಕಾರ್ಯದರ್ಶಿ ಶ್ರೀ ಜಗದೀಶ್ ಕೋಟ್ಯಾನ್,ಕ್ಲಬ್ ನ ಕ್ರಿಕೆಟ್ ತಂಡದ ನಾಯಕ ಶ್ರೀ ಗೌತಮ್ ಬೆಲ್ಚೆಡ್, ಸದಸ್ಯರಾದ ಶ್ರೀ ಚಂದ್ರಶೇಖರ ದೇವಾಡಿಗ, ಶ್ರೀ ಚಂದ್ರ ಸುವರ್ಣ ಶ್ರೀ ಸೋಮನಾಥ್, ಮಹಿಳಾ ಸದಸ್ಯೆಯರಾದ ಶ್ರೀಮತಿ ಪ್ರಮೀಳಾ.ಕೆ.ದೇವಾಡಿಗ, ಶ್ರೀಮತಿ ಸರಿತಾ ಹಾಗೂ ಮತ್ತಿತರರು ಭಾಗವಹಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…