ಮೊದಲಿನಿಂದ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ.
ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ರು. ಜಿಲ್ಲೆಯ ಜನತೆ ಮುಕ್ತ ಮನಸ್ಥಿತಿಯವರು ಹಾಗೂ ಸೌಹಾರ್ದತೆಯನ್ನು ಕಾಪಾಡುವವರು ಎಂಬುದು ಇಲ್ಲಿನವರ ಮಾತಿನಲ್ಲಿ ಕಾಣುತ್ತಿದೆ. ಕಳೆದ ಮೂರು ವರ್ಷಗಳಿಂದ ಈದ್ ಹಾಗೂ ಚೌತಿ ಕೆಲವು ದಿನಗಳ ಅಂತರದಲ್ಲೇ ಬರುತ್ತಿರುವುದು ದೇವರ ಶುಭ ಸಂಕೇತ ಎಂದು ಭಾವಿಸಬೇಕು. ಕೆಲವು ನಿಬಂಧನೆ ಯಾಕೆ ಎಂದರ ಸಮಾಜದ ಎಲ್ಲರೂ ಸೌಹಾರ್ದವಾಗಿ ಆಚರಣೆ ಆಗಬೇಕು. ಗೋಡೆ ಹಾಕಲು ನಮಗೂ ಇಷ್ಟ ಇಲ್ಲ. ಕೆಲವು ಜನ ಕಿಡಿಗೇಡಿಗಳಿಂದ ಎಲ್ಲರಿಗೂ ಸಮಸ್ಯೆ ಆಗುತ್ತದೆ. ನೀವು ಮಫ್ತಿಯಲ್ಲಿ ಸಂಭ್ರಮಿಸಿದರೆ ನಾವು ಸಮವಸ್ತçದಲ್ಲಿ ಹಬ್ಬಗಳ ಸಂಭ್ರಮ ಪಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಈ ಸಂಧರ್ಭದಲ್ಲಿ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ, ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ಕುಮಾರ್, ಸುಳ್ಯದ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…