ಇತರೆ

ಮಂಗಳೂರು: ಡಿಜೆ ಬಳಕೆಗೆ ವಿರೋಧವಿದೆ, ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು; ಹಿಂದೂ ಸಂಘಟನೆ

ಸಂಘರ್ಷ ಆಗುತ್ತದೆ ಎಂಬ ಕಾರಣವನ್ನಿಟ್ಟುಕೊಂಡು, ಗಣೇಶೋತ್ಸವ, ಜನ್ಮಾಷ್ಟಮಿಯಂಥಹ ಹಬ್ಬಗಳಿಗೆ ಜಿಲ್ಲಾಡಳಿತ ಹಲವು ನಿಯಮಗಳನ್ನು ವಿಧಿಸಿದೆ. ಆದರೆ ಇಷ್ಟರವರೆಗೆ ಜನ್ಮಾಷ್ಟಮಿ, ಗಣೇಶೋತ್ಸವ, ದಸರಾ ಮೆರವಣಿಗೆಗಳಲ್ಲಿ ಗಲಭೆ ಆಗಿದೆಯಾ? ಡಿಜೆಯಿಂದ ಗಲಾಟೆಯಾಗಿದೆ, ಶಬ್ದ ಮಾಲಿನ್ಯ ಆಗಿದ್ದು ಇದಕ್ಕೆ ನಮ್ಮ ವಿರೋಧವೂ ಇದೆ. ಆದರೆ ದೊಡ್ಡ ಬಾಕ್ಸ್ ಇಟ್ರೆ ಹೇಗೆ ಗಲಾಟೆ ಆಗುತ್ತೆ? ಕಡಿಮೆ ಸೌಂಡ್ ಮಾಡಿ ಏನು ಪ್ರಯೋಜನ? ಸಾವಿರಾರು ಮಂದಿ ಸೇರುವ ಸಭೆಯಲ್ಲಿ ಹಿಂದಿನವರಿಗೆ ಕೇಳುತ್ತಾ? ಕುದ್ರೋಳಿ ಉತ್ಸವವನ್ನು 10.30ಕ್ಕೆ ಮುಗಿಸಲು ಸಾಧ್ಯವಿದೆಯಾ? ಹೀಗೆಂದು ವಿಶ್ವಹಿಂದೂ ಪರಿಷತ್‌ನ ಕರ್ನಾಟಕದ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪ್ರಶ್ನಿಸಿದ್ದಾರೆ.

ಮಂಗಳೂರಿನ ವಿಎಚ್‌ಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶರಣ್, ಗಣೇಶೋತ್ಸವ, ದಸರಾ ಹಬ್ಬಗಳನ್ನು ಮುಂದಿಟ್ಟುಕೊಂಡು ಪೊಲೀಸ್ ಇಲಾಖೆ ಆದೇಶ ಹೊರಡಿಸಿ ಧ್ವನಿ ವರ್ಧಕಕ್ಕೆ ನಿಯಮ ವಿಧಿಸಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು 10.30ಗೆ ಮುಗಿಸಬೇಕು, ಡಿಜೆ ಬಳಸಬಾರದು, ಧ್ವನಿವರ್ಧಕ ಶಬ್ದ ಇಷ್ಟೇ ಇರಬೇಕೆಂಬ ಆದೇಶ ಕೊಟ್ಟಿದ್ದಾರೆ. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಕಮೀಷನರ್, ಜಿಲ್ಲಾ ಎಸ್ಪಿ, ಡಿಸಿ ತಿಳಿಸಿದ್ದಾರೆ. ಆದರೆ ಡಿಜೆ ಬಳಸಬಾರದು ಎಂಬ ಆದೇಶವನ್ನು ವಿಎಚ್‌ಪಿ ಸ್ವಾಗತಿಸಿದೆ. ಕಳೆದ ಹತ್ತಾರು ವರ್ಷಗಳಿಂದ ಡಿಜೆಗೆ ಅವಕಾಶ ಕೊಡಬಾರದು ಎಂದಿದ್ದೆವು.

ಡ್ರಗ್ಸ್ ಮುಕ್ತ ಕರಾವಳಿ ಮಾಡುವ ಕ್ರಮಕ್ಕೆ ನಮ್ಮ ಸ್ವಾಗತವಿದ್ದು, ನಾವೂ ಸಹಕಾರ ಕೊಡುತ್ತೇವೆ ಎಂದರು. ಕಮಿಷನರ್ ಮಂಗಳೂರಿಗೆ ಬಂದ ಮೇಲೆ ಜಾಲತಾಣಗಳಲ್ಲಿ ಪ್ರಚೋದನಕಾರಿ ಬರಹ ಕಡಿಮೆಯಾಗಿದೆ. ಆದರೆ ಶಾಂತಿ ಸುವ್ಯವಸ್ಥೆ ನೆಪದಲ್ಲಿ ನಿರ್ಬಂಧ ಹೇರಲಾಗದು ಎಂದರು. ತುಳುನಾಡು ಎಂದರೆ ಬಹಳ ವಿಶೇಷತೆಯನ್ನು ಒಳಗೊಂಡಿದೆ, ಕೋಲ, ನಾಗಾರಾಧನೆ, ಯಕ್ಷಗಾನ… ಹೀಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಂದಾಗಿ ತುಳುನಾಡು ಸಂಸ್ಕೃತಿ ಪ್ರಸಿದ್ಧವಾಗಿದೆ. ಇದಕ್ಕೆ ಈ ಕಾರ್ಯಕ್ರಮಕ್ಕೆ ವಿದೇಶಗಳಿಂದಲೂ ಬರುತ್ತಾರೆ. ಗಣೇಶೋತ್ಸವ 7, ದಸರ 10 ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮದಿಂದ ಅಲಂಕಾರ, ಶಾಮಿಯಾನ, ಧ್ವನಿವರ್ಧಕ ವ್ಯಾಪಾರಿಗಳು ಜೀವನ ನಡೆಸುತ್ತಾರೆ. ಆದರೆ ಹೊಸ ನಿಯಮಗಳಿಂದ ಅವರ ಜೀವನಕ್ಕೆ ಪೆಟ್ಟು ಬಿದ್ದಿದೆ. ನಿಯಮಗಳನ್ನು ಸಡಿಲಿಸುವಂತೆ ಮನವರಿಕೆ ಮಾಡಲು ಡಿಸಿಗೆ ಮನವಿ ಸಲ್ಲಿಸಿದ್ದೇವೆ.

ಆದರೆ ಅಲ್ಲಿ ಡಿಸಿ ಇರದ ಕಾರಣ ಎಡಿಸಿಗೆ ಮನವಿ ಕೊಟ್ಟಿದ್ದೇವೆ ಎಂದರು. ಪ್ರತಿವರ್ಷದಂತೆ ಈ ಬಾರಿಯೂ ದಾರ್ಮಿಕ ಉತ್ಸವ, ಮೆರವಣಿಗೆಗಳನ್ನು ನಡೆಸಲು ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿ 2000ದ ನಿಯಮ 5(3)ರಲ್ಲಿ ಪ್ರದಕ್ತವಾಗಿರುವ ಅಧಿಕಾರ ಉಪಯೋಗಿಸಿ ಜಿಲ್ಲೆಯಲ್ಲಿ ಆಗಸ್ಟ್ 27,28,29,30,31 ಹಾಗೂ ಸೆ.2ರಂದು ಗಣೇಶೋತ್ಸವ ಮೆರವಣಿಗೆ, ಅ.1,2,3ರಂದು ದಸರಾ ಆಚರಿಸಲು ರಿಯಾಯಿತಿ ಕೊಟ್ಟು ಅನುಕೂಲ ಮಾಡಿಕೊಡುವಂತೆ ಅವರು ವಿನಂತಿಸಿದರು. ನಮಗೆ ಗಣೇಶೋತ್ಸವ ಆಯೋಜಕರು, ಧ್ವನಿ ವರ್ಧಕ ಸಂಘದವರೂ ನಿಯಮಗಳನ್ನು ಸಡಿಲಿಸುವಂತೆ ಮನವಿ ಮಾಡಿದ್ದಾರೆ. ಹಾಗಾಗಿ ತುಳುನಾಡಿನ ಸಂಸ್ಕೃತಿಗೆ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡುವಂತೆ ಅವರು ಒತ್ತಾಯಿಸಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಜಿಲ್ಲಾಧ್ಯಕ್ಷ ಎಚ್‌ಕೆ ಪರುಷೋತ್ತಮ, ಪ್ರಾಂತ ಸಹ ಸೇವಾ ಪ್ರಮುಖ್ ಗೋಪಾಲ್ ಕುತ್ತಾರ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

43 mins ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

19 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

19 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

20 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

7 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

7 days ago