ಜನ ಮನದ ನಾಡಿ ಮಿಡಿತ

Advertisement

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ..!

ಉಡುಪಿ ಪೊಲೀಸರಿಂದ ಬಂಧಿಸಲ್ಪಟ್ಟ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬ್ರಹ್ಮಾವರದ ಮ್ಯಾಜಿಸ್ತ್ರೇಟ್ ನ್ಯಾಯಾಲಯ ಆದೇಶಿಸಿದೆ.

ಬ್ರಹ್ಮಾವರದಲ್ಲಿ ತಿಮರೋಡಿ ಅವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅವರನ್ನು ಮ್ಯಾಜಿಸ್ಟ್ರೇಟರ ಎದುರು ಹಾಜರುಪಡಿಸಲಾಗಿತ್ತು. ಬಿ.ಜೆ.ಪಿ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಮಾನಹಾನಿ ಮಾಡಿರುವರೆಂಬ ಆರೋಪ ಮಹೇಶ್ ಶೆಟ್ಟಿ ಅವರ ಮೇಲಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಮಹೇಶ್ ಶೆಟ್ಟಿ ಅವರಿಗೆ ಎರಡು ಬಾರಿ ನೋಟೀಸು ನೀಡಲಾಗಿತ್ತು, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಉಡುಪಿ ಎಸ್.ಪಿ. ಹರಿರಾಂ ಶಂಕರ್ ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353(2) ಮತ್ತು 352ರನ್ವಯ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ತಿಮರೋಡಿ ಅವರನ್ನುಬೆಳ್ತಂಗಡಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡು ಉಡುಪಿಗೆ ಕರೆತರುವಾಗ ಕಾರ್ಕಳದಲ್ಲಿ ರಸ್ತೆ ಬದಿ ನೆರೆದಿದ್ದ ಹಿಂದೂ ಕಾರ್ಯಕರ್ತರು ‘ಮಹೇಶಣ್ಣನಿಗೆ ಜೈ’ ಎಂದು ಜೈಕಾರ ಹಾಕಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆ ಎದುರು ಕೂಡಾ ಮಹೇಶ್ ಶೆಟ್ಟಿ ಬೆಂಬಲಿಗರು ನೆರೆದಿದ್ದರು ಹಾಗು ಜೈಕಾರ ಹಾಕಿದ್ದರು. ಈ ಸಂದರ್ಭ ಮಾತನಾಡಿದ್ದ ಮಹೇಶ್ ಶೆಟ್ಟಿ ತನ್ನ ಜೀವಕ್ಕೇನಾದರೂ ಆದರೆ ಅದಕ್ಕೆ ಬಿ.ಜೆ.ಪಿ. ಮತ್ತು ರಾಜ್ಯ ಸರಕಾರ ಕಾರಣ ಎದು ಆಕ್ರೋಶದಿಂದ ನುಡಿದಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!