ಉಡುಪಿ ಪೊಲೀಸರಿಂದ ಬಂಧಿಸಲ್ಪಟ್ಟ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬ್ರಹ್ಮಾವರದ ಮ್ಯಾಜಿಸ್ತ್ರೇಟ್ ನ್ಯಾಯಾಲಯ ಆದೇಶಿಸಿದೆ.
ಬ್ರಹ್ಮಾವರದಲ್ಲಿ ತಿಮರೋಡಿ ಅವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅವರನ್ನು ಮ್ಯಾಜಿಸ್ಟ್ರೇಟರ ಎದುರು ಹಾಜರುಪಡಿಸಲಾಗಿತ್ತು. ಬಿ.ಜೆ.ಪಿ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಮಾನಹಾನಿ ಮಾಡಿರುವರೆಂಬ ಆರೋಪ ಮಹೇಶ್ ಶೆಟ್ಟಿ ಅವರ ಮೇಲಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಮಹೇಶ್ ಶೆಟ್ಟಿ ಅವರಿಗೆ ಎರಡು ಬಾರಿ ನೋಟೀಸು ನೀಡಲಾಗಿತ್ತು, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಉಡುಪಿ ಎಸ್.ಪಿ. ಹರಿರಾಂ ಶಂಕರ್ ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353(2) ಮತ್ತು 352ರನ್ವಯ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ತಿಮರೋಡಿ ಅವರನ್ನುಬೆಳ್ತಂಗಡಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡು ಉಡುಪಿಗೆ ಕರೆತರುವಾಗ ಕಾರ್ಕಳದಲ್ಲಿ ರಸ್ತೆ ಬದಿ ನೆರೆದಿದ್ದ ಹಿಂದೂ ಕಾರ್ಯಕರ್ತರು ‘ಮಹೇಶಣ್ಣನಿಗೆ ಜೈ’ ಎಂದು ಜೈಕಾರ ಹಾಕಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆ ಎದುರು ಕೂಡಾ ಮಹೇಶ್ ಶೆಟ್ಟಿ ಬೆಂಬಲಿಗರು ನೆರೆದಿದ್ದರು ಹಾಗು ಜೈಕಾರ ಹಾಕಿದ್ದರು. ಈ ಸಂದರ್ಭ ಮಾತನಾಡಿದ್ದ ಮಹೇಶ್ ಶೆಟ್ಟಿ ತನ್ನ ಜೀವಕ್ಕೇನಾದರೂ ಆದರೆ ಅದಕ್ಕೆ ಬಿ.ಜೆ.ಪಿ. ಮತ್ತು ರಾಜ್ಯ ಸರಕಾರ ಕಾರಣ ಎದು ಆಕ್ರೋಶದಿಂದ ನುಡಿದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…