ಬಂಟ್ವಾಳ ತಾಲೂಕಿನಾದ್ಯಂತ ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಹಶಿಲ್ದಾರರಿಗೆ ಎಸ್ಡಿಪಿಐ ನಿಯೋಗದಿಂದ ಮನವಿ ಸಲ್ಲಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ನೇತೃತ್ವದ ನಿಯೋಗದಿಂದ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಇನ್ನು ಈ ಸಂಧರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…