ಉಡುಪಿಯಿಂದ ಮಂಗಳೂರಿಗೆ ತನ್ನ ಸ್ನೇಹಿತರಾದ ವಿಡಿಯೋ ಎಡಿಟರ್ ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಮುಳೂರು ಬಳಿ ನಡೆದ ಕಾರು ಅಪಘಾತದಲ್ಲಿ 28 ವರ್ಷದ ಛಾಯಾಗ್ರಾಹಕ ಡಿಜೆ ಮರ್ವಿನ್ ಅವರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ನಡೆದಿದೆ.
ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ಚಾಲಕರಾದ ಜಲಾಲುದ್ದೀನ್, ಹಮೀದ್ ಉಚ್ಚಿಲ, ಕೆ.ಎಂ. ಸಿರಾಜ್, ಅನ್ವರ್ ಮತ್ತು ಪೊಲೀಸ್ ಅಧಿಕಾರಿಗಳು ತಕ್ಷಣ ಮೂವರು ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮರ್ವಿನ್ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ, ಆದರೆ ಪ್ರಜ್ವಲ್ ಮತ್ತು ಪ್ರಸಾದ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತಕ್ಕೆ ಒಂದು ದಿನ ಮೊದಲು, ಮರ್ವಿನ್ ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಕೂಡ ಮಾಡಿದ್ದರು, ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಅವರು ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರ ಯೋಜನೆಗಳಲ್ಲಿ ಕೆಲಸ ಮಾಡಿದ್ದರು, ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊಂದಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…