ವಿಶೇಷ ವರದಿ

ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ 11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ

11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ, ತಂದೆ -ದಿ. ಸಂಜು ಮತ್ತು ತಾಯಿ ರಂಜಿತ ಅವರ ಮುದ್ದಿನ ಮಗ. ಎಳವೆಯಲ್ಲೇ ತಂದೆಯನ್ನು ಕಳೆದುಕೊಂಡರೂ ತಾಯಿ ನೀಡಿದ ಪ್ರೋತ್ಸಾಹ ಕಲಾಕ್ಷೇತ್ರದಲ್ಲಿ ಮಿನುಗುವಂತೆ ಮಾಡಿತು.

ಶಿವಮೊಗ್ಗದ ಬೇಲೂರಿನಲ್ಲಿ ಜನಸಿದ ಈತ ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ಶಿವಮೊಗ್ಗ ಇಲ್ಲಿ 6 ನೆ ತರಗತಿಯ ವಿಧ್ಯಾರ್ಥಿಯಾಗಿದ್ದಾನೆ. ನೃತ್ಯ, ನಟನೆ, ಕರಾಟೆ, ಸ್ಪೋರ್ಟ್ಸ್ ಇವೆಲ್ಲವೂ ಈತನಿಗೆ ಅಚ್ಚುಮೆಚ್ಚು. ಸಿದ್ಧಾರ್ಥ್ 6 ವರ್ಷದಿಂದ ನೃತ್ಯ ಕಲಿಯುವತ್ತ ಆಸಕ್ತಿ ಹೊಂದಿದ್ದಾನೆ. ಹಲವಾರು ನೃತ್ಯ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದು ಮಂಗಳೂರಿನ ಸ್ಪಂದನ ಟಿವಿ, ಜೂಮ್ ಟಿವಿ, ಸುವರ್ಣ ಚಾನಲ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಈತನಿಗೆ ಕರ್ನಾಟಕ ಬಾಲ ರತ್ನ 2022, ಸಾಧಕ ರತ್ನ 2022,ಸುವರ್ಣ ಸಾಧನ ಶ್ರೀ ಪ್ರಶಸ್ತಿ, ಸೇವಾ ರತ್ನ 2023 ಈತನ ಕಲಾಸೇವೆಗೆ ಸಂದ ಗೌರವ. 2023- 24ರ ಅಚೀವ್‌ಮೆಂಟ್ ಅವಾರ್ಡ್, ಹಿಪ್ ಹಾಪ್ ಡ್ಯಾನ್ಸ್ ನ್ಯಾಷನಲ್ ಲೆವೆಲ್ ಮತ್ತು ಇಂಟರ್‌ನ್ಯಾಷನಲ್ ಲೆವೆಲ್ ಗೋಲ್ಡ್ ಮೆಡಲಿಸ್ಟ್, ನೇಪಾಳದಲ್ಲಿ ನಡೆದ ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ 2 ವಿಭಾಗದಲ್ಲಿ ಭಾಗವಹಿಸಿ 2 ಗೋಲ್ಡ್ ಮೆಡಲ್ ಪಡೆದಿರುತ್ತಾನೆ.

ಅದಲ್ಲದೆ ಕರಾಟೆ ನ್ಯಾಷನಲ್ ಮತ್ತು ಇಂಟರ್‌ನ್ಯಾಷನಲ್ ಲೆವೆಲ್ ಅಲ್ಲಿ ಭಾಗವಹಿಸಿ ಮೊದಲ ಸ್ಥಾನ ಪಡೆದಿರುವುದು ಎಳವೆಯಲ್ಲೇ ಈತನ ಸಾಧನೆಯ ಶಿಖರಕ್ಕೆ ಮುನ್ನುಡಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

1 day ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

2 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

5 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

6 days ago