ವಿಟ್ಲ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ಪಟ್ಟಣ ಪಂಚಾಯಿತಿಯ ಅಂಗಡಿ ಮಳಿಗೆ ಜಿ 3 ಯನ್ನು 2019 ನೇ ಸಾಲಿನಲ್ಲಿ ಹೀರಾ ರಾಮ್ ಎಂಬವರು ಏಲಂ ನಲ್ಲಿ ಮಾಸಿಕ ಬಾಡಿಗೆ ಆಧಾರದಲ್ಲಿ ಮಳಿಗೆ ಪಡೆದು ರೂ 8.87 ಲಕ್ಷ ಬಾಡಿಗೆ ಬಾಕಿ ಇಟ್ಟು ಪಾವತಿಸದೆ ಇರುವುದರಿಂದ ಬಾಡಿಗೆಯನ್ನು ಪಾವತಿಸಲು ಹಲವಾರು ಬಾರಿ ನೋಟಿಸ್ ನೀಡಿದ್ದರೂ ಕೂಡಾ ಬಾಡಿಗೆ ಪಾವತಿಸದೆ ಪಟ್ಟಣ ಪಂಚಾಯಿತಿಗೆ ವಂಚಿಸಿ ಅಂಗಡಿಗೆ ಬಾಗಿಲು ಹಾಕಿ ಹೋಗಿರುತ್ತಾರೆ.
ಈ ಬಗ್ಗೆ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯ ತೀರ್ಮಾನದಂತೆ ಸದ್ರಿ ಅಂಗಡಿಯನ್ನು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕರುಣಾಕರ ವಿ ಯವರ ಮಾರ್ಗದರ್ಶನದಲ್ಲಿ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಪಂಚಾಯಿತಿಯ ವಶಕ್ಕೆ ಪಡೆಯಲಾಯಿತು. ಕಾರ್ಯಾಚರಣೆಯಲ್ಲಿ ಸಮುದಾಯ ಸಂಘಟನಾಧಿಕಾರಿ ಶ್ರೀ ಶೈಲ ಸಂಕನಗೌಡ, ಚಂದ್ರಶೇಖರ ವರ್ಮ,ಲ್ಯಾನ್ಸಿ ಬ್ರಿಯಾನ್ ಹಾಗೂ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…