ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ ಅವರು ನಿಧನ ಹೊಂದಿದ್ದಾರೆ. ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ರು.

ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಯತೀಂದ್ರ ಅವರು ಕೃಷಿಕರಾಗಿ ಬಹಳ ಶ್ರಮಜೀವಿಯಾಗಿದ್ದು, ವಿವಿಧ ಬಗೆಯ ಕೃಷಿ ಉಪಕರಣ ಖರೀದಿ ಮಾಡಿ ಅದರಲ್ಲಿ ಯಶಸ್ಸು ಪಡೆದು ಕೃಷಿಯನ್ನು ಮಾಡಿ ಜನಾನುರಾಗಿಯಾಗಿದ್ದರು.



