ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಟ್ಟಡವೊಂದರಲ್ಲಿ ಸಾವಿರಾರು ರೂ ಮೌಲ್ಯದ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು..!

ಕಟ್ಟಡವೊಂದರಲ್ಲಿ ಸಾವಿರಾರು ರೂ ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿದೆ ಎಂಬ ಆರೋಪದ ಮೇಲೆ ಕಂದಾಯ ಇಲಾಖೆ ಹಾಗೂ ಬಂಟ್ವಾಳ ಪೋಲೀಸರು ಜಂಟಿಯಾಗಿ ಕಾರ್ಯಚರಣೆ ನಡೆಸಿದ್ದಾರೆ.

ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಅಕ್ಕಿ ದಾಸ್ತಾನು ಇರಿಸಲಾಗಿರುವ ಆರೋಪವಿದ್ದು, ಕಲ್ಲಡ್ಕ ನಿವಾಸಿ ಉಮರಬ್ಬ ಅವರಿಗೆ ಸೇರಿದ ಕಟ್ಟಡ ಇದಾಗಿದೆ. ಇಲ್ಲಿ ಸುಮಾರು 21 ಕಿಂಟ್ವಾಲ್ ಬೆಳ್ತಿಗೆ ಹಾಗೂ 4 ಕಿಂಟ್ವಾಲ್ ಕುಚಲಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜೊತೆಗೆ ಮಾಲಕ ಉಮರಬ್ಬ ಹಾಗೂ ಈತನ ಜೊತೆ ಕೆಲಸಗಾರನಾಗಿರುವ ರಫೀಕ್ ಎಂಬಾತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು 25 ಕಿಂಟ್ವಾಲ್ ಅಕ್ಕಿಯ ಚೀಲಗಳ ಜೊತೆ ಅಕ್ರಮವಾಗಿ ಅಕ್ಕಿಯನ್ನು ಪಡೆಯಲು ಉಪಯೋಗಿಸುತ್ತಿದ್ದ ರಿಕ್ಷಾ ಹಾಗೂ ತೂಕ ಮಾಪನ ಸೇರಿ ದಂತೆ ಒಟ್ಟು ಅಂದಾಜು 85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ನಡೆಸಿದ ಕಂದಾಯ ಇಲಾಖೆಯ ಆಹಾರ ನಿರೀಕ್ಷಕ ಪ್ರಶಾಂತ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!