ಕಟ್ಟಡವೊಂದರಲ್ಲಿ ಸಾವಿರಾರು ರೂ ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿದೆ ಎಂಬ ಆರೋಪದ ಮೇಲೆ ಕಂದಾಯ ಇಲಾಖೆ ಹಾಗೂ ಬಂಟ್ವಾಳ ಪೋಲೀಸರು ಜಂಟಿಯಾಗಿ ಕಾರ್ಯಚರಣೆ ನಡೆಸಿದ್ದಾರೆ.
ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಅಕ್ಕಿ ದಾಸ್ತಾನು ಇರಿಸಲಾಗಿರುವ ಆರೋಪವಿದ್ದು, ಕಲ್ಲಡ್ಕ ನಿವಾಸಿ ಉಮರಬ್ಬ ಅವರಿಗೆ ಸೇರಿದ ಕಟ್ಟಡ ಇದಾಗಿದೆ. ಇಲ್ಲಿ ಸುಮಾರು 21 ಕಿಂಟ್ವಾಲ್ ಬೆಳ್ತಿಗೆ ಹಾಗೂ 4 ಕಿಂಟ್ವಾಲ್ ಕುಚಲಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜೊತೆಗೆ ಮಾಲಕ ಉಮರಬ್ಬ ಹಾಗೂ ಈತನ ಜೊತೆ ಕೆಲಸಗಾರನಾಗಿರುವ ರಫೀಕ್ ಎಂಬಾತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು 25 ಕಿಂಟ್ವಾಲ್ ಅಕ್ಕಿಯ ಚೀಲಗಳ ಜೊತೆ ಅಕ್ರಮವಾಗಿ ಅಕ್ಕಿಯನ್ನು ಪಡೆಯಲು ಉಪಯೋಗಿಸುತ್ತಿದ್ದ ರಿಕ್ಷಾ ಹಾಗೂ ತೂಕ ಮಾಪನ ಸೇರಿ ದಂತೆ ಒಟ್ಟು ಅಂದಾಜು 85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ನಡೆಸಿದ ಕಂದಾಯ ಇಲಾಖೆಯ ಆಹಾರ ನಿರೀಕ್ಷಕ ಪ್ರಶಾಂತ್ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…