ಕಟ್ಟಡವೊಂದರಲ್ಲಿ ಸಾವಿರಾರು ರೂ ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿದೆ ಎಂಬ ಆರೋಪದ ಮೇಲೆ ಕಂದಾಯ ಇಲಾಖೆ ಹಾಗೂ ಬಂಟ್ವಾಳ ಪೋಲೀಸರು ಜಂಟಿಯಾಗಿ ಕಾರ್ಯಚರಣೆ ನಡೆಸಿದ್ದಾರೆ.
ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಅಕ್ಕಿ ದಾಸ್ತಾನು ಇರಿಸಲಾಗಿರುವ ಆರೋಪವಿದ್ದು, ಕಲ್ಲಡ್ಕ ನಿವಾಸಿ ಉಮರಬ್ಬ ಅವರಿಗೆ ಸೇರಿದ ಕಟ್ಟಡ ಇದಾಗಿದೆ. ಇಲ್ಲಿ ಸುಮಾರು 21 ಕಿಂಟ್ವಾಲ್ ಬೆಳ್ತಿಗೆ ಹಾಗೂ 4 ಕಿಂಟ್ವಾಲ್ ಕುಚಲಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜೊತೆಗೆ ಮಾಲಕ ಉಮರಬ್ಬ ಹಾಗೂ ಈತನ ಜೊತೆ ಕೆಲಸಗಾರನಾಗಿರುವ ರಫೀಕ್ ಎಂಬಾತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು 25 ಕಿಂಟ್ವಾಲ್ ಅಕ್ಕಿಯ ಚೀಲಗಳ ಜೊತೆ ಅಕ್ರಮವಾಗಿ ಅಕ್ಕಿಯನ್ನು ಪಡೆಯಲು ಉಪಯೋಗಿಸುತ್ತಿದ್ದ ರಿಕ್ಷಾ ಹಾಗೂ ತೂಕ ಮಾಪನ ಸೇರಿ ದಂತೆ ಒಟ್ಟು ಅಂದಾಜು 85 ಸಾವಿರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾಳಿ ನಡೆಸಿದ ಕಂದಾಯ ಇಲಾಖೆಯ ಆಹಾರ ನಿರೀಕ್ಷಕ ಪ್ರಶಾಂತ್ ಅವರು ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…