ಕಾಂತಾವರ ಗ್ರಾಮದ ಬೇಲಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಪ್ರದೀಪ್ ಬೇಲಾಡಿ ಅವರನ್ನು ಆಯ್ಕೆ ಮಾಡಲಾಯಿತು.
ಬೇಲಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ಸಭೆಯಲ್ಲಿ ಪ್ರದೀಪ್ ಬೇಲಾಡಿ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದೊಂದಿಗೆ ಆಯ್ಕೆ ಮಾಡಲಾಯಿತು, ಹಾಗೂ ಉಪಾಧ್ಯಕ್ಷರಾಗಿ ಅರುಣ್ ಕೋಟ್ಯಾನ್ ಕೇಪ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪೂಜಾರಿ ಗುಡ್ಡೆಯಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಧೀರಜ್ ಶೆಟ್ಟಿ ಪಡ್ಡಲ್ಲಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಪ್ರತಿನಿಧಿಯಾಗಿ ಪ್ರಶಸ್ತ್ ಶೆಟ್ಟಿ ಮುದಲೆಮನೆ ಬೇಲಾಡಿ ಅವರನ್ನು ಆಯ್ಕೆ ಮಾಡಲಾಯಿತು. ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ್.ಎಸ್.ಆರ್ ಅವರು ಸಂಘದ ಕೋಶಾಧಿಕಾರಿಯಾಗಿರುತ್ತಾರೆ. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ನಂತರ ನವರಾತ್ರಿ ಸಂದರ್ಭದಲ್ಲಿ ಶಾಲೆಯಲ್ಲಿ ನಡೆಯಲಿರುವ ಶಾರದಾ ಪೂಜಾ ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆಗಳು ಹಾಗೂ ಶಾಲಾ ಅಭಿವೃದ್ಧಿಯ ಕುರಿತಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್.ಎಸ್.ಆರ್, ಹಳೆ ವಿದ್ಯಾರ್ಥಿ ಸಂಘದ ನಿರ್ಗಮಿತ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿಗಳಾದ ರಂಜಿತ್ ಶೆಟ್ಟಿ ಪುಂಚಾಡಿ ಮತ್ತು ಪ್ರಭಾಕರ ಕುಲಾಲ್, ಶಾರದಾ ಪೂಜಾ ಮಹೋತ್ಸವದ ಅರ್ಚಕರಾದ ಸುಧೀರ್ ಭಟ್ ನ್ಯಾಯತೋಟ, ಹಿರಿಯ ಹಳೆ ವಿದ್ಯಾರ್ಥಿಗಳಾದ ಸುರೇಶ್ ಭಟ್ ನ್ಯಾಯತೋಟ, ಶ್ರೀಮತಿ ವಿದ್ಯಾ.ವಿ. ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…