ಕಾಂತಾವರ ಗ್ರಾಮದ ಬೇಲಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಪ್ರದೀಪ್ ಬೇಲಾಡಿ ಅವರನ್ನು ಆಯ್ಕೆ ಮಾಡಲಾಯಿತು.
ಬೇಲಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹಳೆ ವಿದ್ಯಾರ್ಥಿ ಸಂಘದ ಸಭೆಯಲ್ಲಿ ಪ್ರದೀಪ್ ಬೇಲಾಡಿ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದೊಂದಿಗೆ ಆಯ್ಕೆ ಮಾಡಲಾಯಿತು, ಹಾಗೂ ಉಪಾಧ್ಯಕ್ಷರಾಗಿ ಅರುಣ್ ಕೋಟ್ಯಾನ್ ಕೇಪ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪೂಜಾರಿ ಗುಡ್ಡೆಯಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಧೀರಜ್ ಶೆಟ್ಟಿ ಪಡ್ಡಲ್ಲಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಪ್ರತಿನಿಧಿಯಾಗಿ ಪ್ರಶಸ್ತ್ ಶೆಟ್ಟಿ ಮುದಲೆಮನೆ ಬೇಲಾಡಿ ಅವರನ್ನು ಆಯ್ಕೆ ಮಾಡಲಾಯಿತು. ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸುರೇಶ್.ಎಸ್.ಆರ್ ಅವರು ಸಂಘದ ಕೋಶಾಧಿಕಾರಿಯಾಗಿರುತ್ತಾರೆ. ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ನಂತರ ನವರಾತ್ರಿ ಸಂದರ್ಭದಲ್ಲಿ ಶಾಲೆಯಲ್ಲಿ ನಡೆಯಲಿರುವ ಶಾರದಾ ಪೂಜಾ ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆಗಳು ಹಾಗೂ ಶಾಲಾ ಅಭಿವೃದ್ಧಿಯ ಕುರಿತಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್.ಎಸ್.ಆರ್, ಹಳೆ ವಿದ್ಯಾರ್ಥಿ ಸಂಘದ ನಿರ್ಗಮಿತ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿಗಳಾದ ರಂಜಿತ್ ಶೆಟ್ಟಿ ಪುಂಚಾಡಿ ಮತ್ತು ಪ್ರಭಾಕರ ಕುಲಾಲ್, ಶಾರದಾ ಪೂಜಾ ಮಹೋತ್ಸವದ ಅರ್ಚಕರಾದ ಸುಧೀರ್ ಭಟ್ ನ್ಯಾಯತೋಟ, ಹಿರಿಯ ಹಳೆ ವಿದ್ಯಾರ್ಥಿಗಳಾದ ಸುರೇಶ್ ಭಟ್ ನ್ಯಾಯತೋಟ, ಶ್ರೀಮತಿ ವಿದ್ಯಾ.ವಿ. ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…