ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲರೊಬ್ಬರು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಆ.28ರಂದು ಮುಂಜಾನೆ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60ವ.) ಮೃತಪಟ್ಟವರಾಗಿದ್ದಾರೆ.
ಆ.27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದಿದ್ದು ಆ.28ರಂದು ಮುಂಜಾನೆ 1 ಗಂಟೆ ಸುಮಾರಿಗೆ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ಲಾರಿ ನಿಲ್ಲಿಸಿ ಲಾರಿಯಿಂದ ಇಳಿದು ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ರಾಜಶೇಖರ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…