ಕರಾವಳಿ

ಮಂಗಳೂರು: ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ..!

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೋಬೋಟಿಕ್ ಸರ್ಜರಿ ಸೌಲಭ್ಯವನ್ನು ಆರಂಭಿಸಲಾಗಿದೆ. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಯು ಎಸ್ ಎಸ್ ಐ ಮಂತ್ರ 3.0 ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಅನ್ನು ಅಳವಡಿಸಿಕೊಂಡು ರೊಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಒಂದು ಪ್ರಮುಖ ಹೆಜ್ಜೆಯನ್ನು ದಾಖಲಿಸಿದೆ.

ಎಸ್ ಎಸ್ ಐ ಮಂತ್ರ 3.0 ಭಾರತದಲ್ಲೇ ನಿರ್ಮಿಸಲ್ಪಟ್ಟ, ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿರುವ ಉಪಕರಣ. ಇದರ ನಿರ್ಮಾಣ ಒಂದು ಹೆಮ್ಮೆಯ ಸಾಧನೆ ಯಾಗಿದೆ ಎಂದು ಯೆನೆಪೊಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ವಿಜಯ ಕುಮಾರ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಡಾ. ವಿನ್ನಿ ಮತ್ತು ಮಂತ್ರಾ 3.0 ಎಂಬ ಎರಡು ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ವ್ಯವಸ್ಥೆಗಳನ್ನೂ ಹೊಂದಿರುವ ದೇಶದ ಏಕೈಕ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಾಗಿದೆ.

ಸರ್ಕಾರಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಮೂಲಕ ಬಡ ರೋಗಿಗಳಿಗೆ ಉಚಿತವಾಗಿ ರೋಬೋಟಿಕ್ ಶಸ್ತ್ರಚಿಕಿತ್ಸೆ ನೀಡುವ ದೇಶದ ಏಕೈಕ ಖಾಸಗಿ ಆಸ್ಪತ್ರೆಯಾಗಿ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಗುರುತಿಸಿಕೊಂಡಿದೆ ಎಂದವರು ವಿವರಿಸಿದ್ದಾರೆ. ಮೂತ್ರ ರೋಗ ಶಾಸ್ತ್ರ ಅರ್ಬುದ ಶಸ್ತ್ರಚಿಕಿತ್ಸಾ, ಸ್ತ್ರೀರೋಗ ಶಾಸ್ತ್ರ ಮತ್ತು ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಮಂತ್ರ 3.0 ಅನ್ನು ಬಳಸಿಕೊಂಡು ಸುಮಾರು 100 ಕಾರ್ಯವಿಧಾನಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಮಂತ್ರಾ 2.0 ರ ಸುಧಾರಿತ ಆವೃತ್ತಿಯಾದ ಮಂತ್ರಾ 3.0, ಮುಂದಿನ ತಲೆಮಾರಿನ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಪ್ರತಿಬಿಂಬಿಸುತ್ತದೆ.

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳ ಭಾಗದಲ್ಲಿ 2016 ರಲ್ಲಿ ಡಾ ವಿನ್ಸಿ ಸರ್ಜಿಕಲ್ ಸಿಸ್ಟಮ್ ನೊಂದಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಪರಿಚಯಿಸಿದಂತಹ ಸಂಸ್ಥೆಯಾಗಿದೆ. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಭಾರತೀಯರಾಗಿ, ನಮ್ಮ ದೇಶದಲ್ಲೇ ರೂಪುಗೊಂಡ ಈ ವಿಶ್ವಮಟ್ಟದ ನಾವೀನ್ಯತೆಯೊಂದಿಗೆ ಜಗತ್ತಿನ ಶ್ರೇಷ್ಠ ಸಾಧನೆಗಳಿಗೆ ಸಮಾನವಾಗಿ ನಿಲ್ಲುತ್ತದೆ.

ಇದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದೂ ಡಾ. ವಿಜಯ ಕುಮಾರ್ ಹೇಳಿದ್ದಾರೆ. ರೋಬೋಟಿಕ್ ಶಸ್ತ್ರ ಚಿಕಿತ್ಸೆಯಲ್ಲಿ ಗಾಯದ ಪ್ರಮಾಣ ಬಹಳ ಕಡಿಮೆ ಮತ್ತು ತ್ವರಿತ ಚೇತರಿಕೆ ಹಾಗು ರಕ್ತದ ನಷ್ಟವೂ ಕಡಿಮೆ ಎಂದವರು ರೊಬೋಟಿಕ್ ಶಸ್ತ್ರಚಿಕಿತ್ಸೆಯ ಪ್ರಯೋಜನಗಳನ್ನು ವಿವರಿಸಿದ್ದು, ಯೆನಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಯೆನೆಪೋಯ ಅಬ್ದುಲ್ಲಾ ಕುಂಞ, ಸಹ ಕುಲಪತಿ ಫರ್ಹಾದ್ ಯೇನೆಪೋಯ ಅವರ ದೂರದೃಷ್ಟಿಯುತ ನಾಯಕತ್ವದ ಮಾರ್ಗದರ್ಶನದಲ್ಲಿ, ಈ ಆಸ್ಪತ್ರೆ ಸಮಾಜದ ಎಲ್ಲಾ ವರ್ಗಗಳಿಗೆ ವಿಶೇಷವಾಗಿ ಅತ್ಯಂತ ಆರ್ಥಿಕವಾಗಿ ಹಿಂದುಳಿದವರಿಗೆ – ವಿಶ್ವಮಟ್ಟದ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ನೀಡಲು ನಿರಂತರವಾಗಿ ಬದ್ಧವಾಗಿದೆ ಎಂದವರು ತಿಳಿಸಿದ್ಧಾರೆ.

ಇನ್ನು ಈ ಸಂದರ್ಭದಲ್ಲಿ ಯೆನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಾಂಶುಪಾಲ ಡಾ.ಮೂಸಬ್ಬ, ಯುರೋ ಲಾಜಿ ವಿಭಾಗದ ಮುಖ್ಯಸ್ಥ ಡಾ.ಮುಜೀಬ್ ರಹ್ಮಾನ್, ಡಾ.ಜಲಾಲುದ್ದೀನ್ ಅಕ್ಬರ್, ಡಾ.ಅಲ್ತಾಫ್, ಡಾ.ಅಂಜುಮ್ ಮತ್ತು ಎಸ್‌ಎಸ್ ಐ ರೋಬೋಟಿಕ್ ಸಂಸ್ಥೆಯ ಸಿಇಒ ವಿಶ್ವ ಜ್ಯೋತಿ ಶ್ರೀವಾತ್ಸವ್ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…

1 week ago

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…

1 week ago

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…

1 week ago